Breaking News

ಪ್ರವಾದಿ ಕುರಿತ ಹೇಳಿಕೆ ವಿರುದ್ಧ ಪ್ರತಿಭಟನೆ: ಯೋಗಿ ಸರ್ಕಾರದಿಂದ ಬುಲ್ಡೋಜರ್ ಅಸ್ತ್ರ

Spread the love

ಲಕ್ನೋ, ಜೂನ್ 11: ನೂಪುರ್ ಶರ್ಮಾ ಪ್ರವಾದಿ ಮುಹಮ್ಮದ್ ಕುರಿತು ಇತ್ತೀಚೆಗೆ ನೀಡಿದ ಹೇಳಿಕೆಗಳ ಹಿಂಸಾಚಾರದ ನಂತರ, ಉತ್ತರ ಪ್ರದೇಶದ ಸಹರಾನ್‌ಪುರದ ಪೊಲೀಸರು ಭಾರಿ ಬಂದೋಬಸ್ತ್‌ನೊಂದಿಗೆ ಬುಲ್ಡೋಜರ್ ಕಾರ್ಯಾಚರಣೆ ಆರಂಭಿಸಿದ್ದಾರೆ.

ಭಾರಿ ಪೊಲೀಸ್ ಉಪಸ್ಥಿತಿಯಲ್ಲಿ ಮುನ್ಸಿಪಲ್ ತಂಡಗಳೊಂದಿಗೆ ಬುಲ್ಡೋಜರ್‌ಗಳಿಂದ ಎರಡು ಮನೆಗಳನ್ನು ಧ್ವಂಸಗೊಳಿಸಿದ ವಿಡಿಯೊಗಳನ್ನು ಪೊಲೀಸರು ಹಂಚಿಕೊಂಡಿದ್ದಾರೆ.

ಸಹರಾನ್‌ಪುರದಲ್ಲಿ ಒಟ್ಟು 64 ಜನರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥರು ಮಾಹಿತಿ ನೀಡಿದ್ದಾರೆ.

ಪೊಲೀಸರು ಹಂಚಿಕೊಂಡ ದೃಶ್ಯಗಳಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾದ ಆರೋಪಿ ಮುಝಮ್ಮಿಲ್ ಮತ್ತು ಅಬ್ದುಲ್ ವಾಕಿರ್ ನಿವಾಸಗಳನ್ನು ಪೊಲೀಸರು ಮತ್ತು ಮುನ್ಸಿಪಲ್ ತಂಡಗಳ ಮೇಲ್ವಿಚಾರಣೆಯಲ್ಲಿ ಬುಲ್ಡೋಜರ್‌ಗಳು ಅವರ ಮನೆಗಳ ಗೇಟ್‌ ಮತ್ತು ಹೊರಗಿನ ಗೋಡೆಗಳನ್ನು ಅಕ್ರಮವಾಗಿ ನಿರ್ಮಾಣ ಮಾಡಲಾಗಿದೆ ಎಂದು ಕೆಡವಲಾಗಿದೆ.


Spread the love

About Laxminews 24x7

Check Also

ಮದುವೆ ಪತ್ರಿಕೆ ಕೊಡುವ ನೆಪದಲ್ಲಿ ಬಂದ ದುಷ್ಕರ್ಮಿಗಳು: ಮಾಲೀಕರ ಕೈಕಾಲು ಕಟ್ಟಿ 200 ಗ್ರಾಂ ಚಿನ್ನ ಕದ್ದು ಎಸ್ಕೇಪ್

Spread the loveಮಂಗಳೂರು/ಬೆಂಗಳೂರು: ಪರಿಚಯವೇ ಇಲ್ಲದವರು ಮನೆಗೆ ಆಹ್ವಾನ ಪತ್ರಿಕೆ ನೀಡುವ ಸೋಗಿನಲ್ಲಿ ಮನೆಗೆ ಬಂದು, ಹಾಡಹಗಲೇ ಮನೆ ಮಾಲೀಕರ ಕೈಕಾಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ