Breaking News

ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ನಮ್ಮ ಅಭ್ಯರ್ಥಿಗಳು ಗೆಲ್ಲಲು ಏನು ಬೇಕೋ ಅದನ್ನು ಮಾಡಿದ್ದಾರೆ: ಬೊಮ್ಮಾಯಿ

Spread the love

ಬೆಳಗಾವಿ: ‘ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರು ಅಮೆರಿಕಕ್ಕೆ ಹೋಗುವುದಾಗಿ ನನಗೆ ಮುಂಚೆಯೇ ಹೇಳಿದ್ದರು. ಆರು ತಿಂಗಳ ಹಿಂದೆಯೇ ಅವರ ಕಾರ್ಯಕ್ರಮ ನಿಗದಿಯಾಗಿದ್ದರಿಂದ, ವಿಧಾನ ಪರಿಷತ್‌ ಚುನಾವಣೆಯ ಪ್ರಚಾರದಲ್ಲಿ ಪಾಲ್ಗೊಳ್ಳಲು ಅವರಿಗೆ ಆಗಿಲ್ಲ.

ಆದರೆ, ನಮ್ಮ ಅಭ್ಯರ್ಥಿಗಳು ಗೆಲ್ಲಲು ಏನು ಬೇಕೋ ಅದನ್ನು ಮಾಡಿದ್ದಾರೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

‘ಕೋರೆ ಅವರು ನಮ್ಮ ಹಿರಿಯರು, ಮಾರ್ಗದರ್ಶಕ. ಅವರ ಕೊಡುಗೆಯನ್ನು ಪಕ್ಷವೂ ಗುರುತಿಸುತ್ತದೆ, ನಾವೂ ಗುರುತಿಸುತ್ತೇವೆ. ಸುದೀರ್ಘ ನಾಲ್ಕು ದಶಕಗಳ ಅವರ ಸಾರ್ವಜನಿಕ ಸೇವೆಯು ನಮಗೆ ಮಾರ್ಗದರ್ಶಿ. ಅವರಿಗೆ ಪಕ್ಷದಲ್ಲಿ ಮಹತ್ವ ನೀಡಿಲ್ಲ ಎಂಬುದು ಬರೀ ಊಹಾಪೋಹ’ ಎಂದು ಅವರು ನಗರದಲ್ಲಿ ಮಧ್ಯಮದವರಿಗೆ ತಿಳಿಸಿದರು.


Spread the love

About Laxminews 24x7

Check Also

ಮನೆಗಳ ಕರ ಸುಲಾತಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಕಾಗವಾಡ ತಾಲೂಕ ಪ್ರಥಮ ಸ್ಥಾನ.

Spread the loveಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ 15 ತಾಲೂಕಿನ ತಾಲೂಕಾ ಪಂಚಾಯಿತಿಗಳ ಪೈಕಿ ಕಾಗವಾಡ ತಾಲೂಕ ಪಂಚಾಯಿತಿ ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ