Breaking News
Home / Uncategorized / ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಗೆಲ್ಲುತ್ತದೆ ಎಂದ ಜೆಡಿಎಸ್ ಎಂಎಲ್‌ಸಿ

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಗೆಲ್ಲುತ್ತದೆ ಎಂದ ಜೆಡಿಎಸ್ ಎಂಎಲ್‌ಸಿ

Spread the love

 ವಿಧಾನ ಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ.

ಮಾದೇಗೌಡ ಗೆಲ್ಲುತ್ತಾರೆ ಎಂದು ವಿಧಾನಪರಿಷತ್ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಹೇಳಿದರು.

ಆಪ್ತ ಕೀಲಾರ ಜಯರಾಂ ಅವರಿಗೆ ಟಿಕೆಟ್ ಕೊಡದ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠರ ವಿರುದ್ಧ ಸಿಡಿದೆದ್ದಿರುವ ಮರಿತಿಬ್ಬೇಗೌಡ ಅವರು ಈ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿದ್ದಾರೆ.

ಇಲ್ಲಿ ಮತ ಚಲಾಯಿಸಿದ ಬಳಿಕ ಮಾತನಾಡಿದ ಅವರು, ಈ ಬಾರಿ ಕಾಂಗ್ರೆಸ್‌ನ ಮಧು ಮಾದೇಗೌಡ ಗೆದ್ದೇ ಗೆಲ್ತಾರೆ. ಕ್ಷೇತ್ರದಲ್ಲಿ ಅವರ ಪರವಾದ ಅಲೆ ಇದೆ. ನಾನೇಕೆ ಮಧು ಅವರನ್ನ ಬೆಂಬಲಿಸಿದೆ ಎಂಬುದು ಮತದಾರರಿಗೆ ಗೊತ್ತಿದೆ ಎಂದು ಪ್ರತಿಕ್ರಿಯಿಸಿದರು.

ಜೆಡಿಎಸ್ ಪಕ್ಷದ ಕೆಲ ಆಂತರಿಕ ವಿಚಾರಗಳನ್ನು ಈಗ ಮಾತನಾಡಲು ಬಯಸುವುದಿಲ್ಲ ಎಂದರು.

ಒಕ್ಕಲಿಗರ ಮತಗಳು ಜೆಡಿಎಸ್‌ಗೇ ಮೀಸಲಿರುತ್ತವೆ ಎಂದು ನಾನು ಹೇಳುವುದಿಲ್ಲ. ಹಿಂದೆ ಬೇರೆ ಸಮುದಾಯದವರು ಗೆದ್ದಿರುವ ಉದಾಹರಣೆ ಇದೆ. ಈ ಬಾರಿ ಕಣದಲ್ಲಿರುವ ಮೂರ್ನಾಲ್ಕು ಮಂದಿ ಒಕ್ಕಲಿಗ ಸಮಾಜದವರೇ ಆಗಿದ್ದಾರೆ. ಎಲ್ಲರಿಗೂ ಮತ ಹಾಕಲು ಮತದಾರರಿಗೆ ಅವಕಾಶ ಇದೆ. ಪ್ರಾಶಸ್ತ್ಯದ ಮತಗಳನ್ನು ಎಲ್ಲರಿಗೂ ಕೊಡಬಹುದು ಎಂದರು.


Spread the love

About Laxminews 24x7

Check Also

ಮದ್ವೆಯಲ್ಲಿ ಮಹಿಳೆಯ ಚಿನ್ನದ ಸರಕ್ಕೆ ಕೈ ಹಾಕಿದ ಕಳ್ಳನಿಗೆ ಧರ್ಮದೇಟು ಬಿತ್ತು

Spread the loveಚಿಕ್ಕಬಳ್ಳಾಪುರ, ಮೇ.26: ಜಿಲ್ಲೆಯ ಗೌರಿಬಿದನೂರು(Gauribidanur) ನಗರದ ಸಾಯಿಕೃಷ್ಣ ಫಂಕ್ಷನ್ ​ಹಾಲ್​ನಲ್ಲಿ ನಡೆದಿದ್ದ ಮದುವೆಯಲ್ಲಿ ಕಳ್ಳತನಕ್ಕೆ ಯತ್ನಿಸಿದ್ದ ವ್ಯಕ್ತಿಗೆ ಹಿಗ್ಗಾಮುಗ್ಗಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ