ವಟ ಸಾವಿತ್ರಿ ವ್ರತದ ಮಂಗಳಕರವಾದ ದಿನವಾದ ಇಂದು ನಿಪ್ಪಾಣಿ ತಾಲೂಕಿನ ಭಿವಶಿ ಗ್ರಾಮದಲ್ಲಿ, ಸುಮಂಗಲಿಯರ ಜೊತೆಗೂಡಿ ಆಲದ ಮರಕ್ಕೆ ಶಾಸ್ತ್ರೋಕ್ತವಾಗಿ *ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಯವರು ಪೂಜೆ ಸಲ್ಲಿಸಿದರು..
ಇದೇ ಸಂಧರ್ಭದಲ್ಲಿ ಮಾತನಾಡಿ ಸಚಿವೆ ಜೊಲ್ಲೆ ಪತಿ-ಪತ್ನಿಯರ ನಡುವಿನ ಪವಿತ್ರ ಬಾಂಧವ್ಯದ ಶ್ರೇಷ್ಠತೆಯನ್ನು ಬಿಂಬಿಸುವ, ಸಂಸಾರದೊಂದಿಗೆ ಪಾರಮಾರ್ಥಿಕ ಚಿಂತನೆಯನ್ನು ಬೋಧಿಸುವ ವಿಶೇಷ ಆಚರಣೆ ಇದಾಗಿದೆ.
ಹೀಗಾಗಿ ಪತಿಯ ಆಯುಷ್ಯ, ಆರೋಗ್ಯ ವೃದ್ಧಿಯಾಗಿ ಈ ವಿಶೇಷ ಆಚರಣೆಯನ್ನು ಮಾಡಲಾಗುತ್ತದೆ ಎಂದರು..
ಈ ಸಂಧರ್ಭದಲ್ಲಿ ಭಿವಶಿ ಗ್ರಾಮದ ನೂರಾರು ಮಹಿಳೆಯರು ಸಚಿವೆ ಜೊಲ್ಲೆಗೆ ಸಾಥ ನೀಡಿದರು…