Breaking News

ಬೆಳಗಾವಿ – ಗೌಂಡವಾಡ ಗ್ರಾಮದಲ್ಲಿ ಸತೀಶ ಪಾಟೀಲ ಎಂಬ ವ್ಯಕ್ತಿಯನ್ನು ರಾತ್ರಿ 9 ಗಂಟೆ ವೇಳೆಗೆ ಜಂಬೆಯಿಂದ ಕೊಚ್ಚಿ ಕೊಲೆ

Spread the love

ಬೆಳಗಾವಿ – ಇಲ್ಲಿಯ ಗೌಂಡವಾಡ ಗ್ರಾಮದಲ್ಲಿ ರಾತ್ರೋರಾತ್ರಿ ಹಿಂಸಾಚಾರ ಬುಗಿಲೆದ್ದಿದೆ. ಓರ್ವನನ್ನು ಬರ್ಬರವಾಗಿ ಕೊಲೆಗೈಯಲ್ಲಾಗಿದ್ದು, ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.

ಗ್ರಾಮದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ.

 

ಹಳೆಯ ಜಮೀನು ವಿವಾದವೊಂದು ಇಂದು ಹೊಸ ತಿರುವು ಪಡೆದು ಹಿಂಸಾಚಾರ ಆರಂಭವಾಗಿದೆ. ವ್ಯಕ್ತಿಯೋರ್ವನನ್ನು ಕೊಚ್ಚಿ ಕೊಲೆಗೈಯಲಾಗಿದೆ.

ಸತೀಶ ಪಾಟೀಲ ಎಂಬ ವ್ಯಕ್ತಿಯನ್ನು ಬಿರ್ಜೆ ಕುಟುಂಬದವರು ಕಾರು ಪಾರ್ಕಿಂಗ್ ಮಾಡಿದ ನೇಪವೊಡ್ದಿ ರಾತ್ರಿ 9 ಗಂಟೆ ವೇಳೆಗೆ ಜಂಬೆಯಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಇದರಿಂದಾಗಿ ಗ್ರಾಮದಲ್ಲಿ ಉದ್ವಿಘ್ನ ಪರಿಸ್ಥಿತಿ ಉಂಟಾಗಿ ಹಲವು ವಾಹನಗಳು ಮತ್ತು ಬೈಕ್‌ಗಳಿಗೆ ಬೆಂಕಿ ಹಚ್ಚಲಾಗಿದೆ.

ಮನೆಗಳಿಗೆ ಬೆಂಕಿ ಹಚ್ಚುವ ಪ್ರಯತ್ನ ಕೂಡ ನಡೆದಿದೆ.
ಇಡೀ ಗ್ರಾಮದಲ್ಲಿ ತ್ವೇಷಮಯ ವಾತಾವರಣವಿದೆ.


Spread the love

About Laxminews 24x7

Check Also

ಜನ್ಮದಿನ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ, ಮೃಣಾಲ್

Spread the loveಬೆಳಗಾವಿ : ಶನಿವಾರ ಬೆನಕನಹಳ್ಳಿಯ ಗಾರ್ಡನ್ ಕೋರ್ಟ್ ಮುಂಬಾಗದಲ್ಲಿ ಹಿರಿಯ ನಾಗರಿಕರೊಂದಿಗೆ ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ