Home / ರಾಜಕೀಯ / ಮದುವೆಯಾದ ಮೂರೇ ತಿಂಗಳಿಗೆ ಹೆಂಡತಿ ಆತ್ಮಹತ್ಯೆ: ಬಾಮೈದುನರಿಂದಲೆ ಕೊಲೆಯಾದ ನಟ ಸತೀಶ್ಮ

ಮದುವೆಯಾದ ಮೂರೇ ತಿಂಗಳಿಗೆ ಹೆಂಡತಿ ಆತ್ಮಹತ್ಯೆ: ಬಾಮೈದುನರಿಂದಲೆ ಕೊಲೆಯಾದ ನಟ ಸತೀಶ್ಮ

Spread the love

ಸ್ಯಾಂಡಲ್‌ವುಡ್ ಯುವ ನಟ ಸತೀಶ್ ವಜ್ರ ಅವರನ್ನು ಚಾಕುವಿನಿಂದ ಇರಿದು ಬರ್ಬರ ಹತ್ಯೆ ಮಾಡಿರುವ ಘಟನೆಗೆ ಇದೀಗ ಹೊಸ ಟ್ವಿಸ್ಟ್ ಸಿಕ್ಕಿದೆ. ಸತೀಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಬಂಧನವಾಗಿದ್ದು, ಸತೀಶ್ ಬಾಮೈದುನರೆ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

 

ಕೆಲವೊಂದು ಶಾರ್ಟ್ ಮೂವಿಯಲ್ಲಿ ಕೆಲಸ ಮಾಡಿದ್ದ ಸತೀಶ್ `ಲಗೋರಿ’ ಎಂಬ ಸಿನಿಮಾದಲ್ಲಿ ನಾಯಕನಾಗಿ ಬಣ್ಣ ಹಚ್ಚಿದ್ದರು. ಸತೀಶ್ ವಜ್ರ, ಅವರನ್ನು ಮನೆಯಲ್ಲಿಯೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಶುಕ್ರವಾರ ರಾತ್ರಿ ಸತೀಶ್ ಆರ್ ಆರ್ ನಗರದ ಮನೆಯಲ್ಲಿರುವಾಗ ಆರೋಪಿಗಳಾದ ಸುದರ್ಶನ್ ಹಾಗೂ ನಾಗೇಂದ್ರ ಕೊಲೆ ಮಾಡಿ ಹೋಗಿದ್ದಾರೆ. ಸತೀಶ್‌ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇದೀಗ ಆರ್.ಆರ್ ನಗರದ ಪೊಲೀಸರಿಂದ ಸುದರ್ಶನ್ ಹಾಗೂ ನಾಗೇಂದ್ರ ಬಂಧನವಾಗಿದೆ.

ಕೆಲ ತಿಂಗಳ ಹಿಂದೆ ಯುವತಿಯೋರ್ವಳನ್ನ ಸತೀಶ್ ಪ್ರೀತಿಸಿ ಮದುವೆಯಾಗಿದ್ದ. ಆದರೆ ಮೂರು ತಿಂಗಳ ಹಿಂದಷ್ಟೇ ಸತೀಶ್ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರು. ತನ್ನ ಅಕ್ಕನಿಗೆ ಭಾವ ಸತೀಶ್‌ ಕಿರುಕುಳ ಕೊಟ್ಟಿದ್ದಾರೆ ಎಂದು ಶಂಕಿಸಿ ಭಾಮೈದನಿಂದಲೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು. 


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ