Breaking News
Home / ಜಿಲ್ಲೆ / ತುಮಕೂರು / ಬೆಳ್ಳಂಬೆಳಗ್ಗೆ ತುಮಕೂರು ಬಳಿ ಭೀಕರ ಅಪಘಾತ

ಬೆಳ್ಳಂಬೆಳಗ್ಗೆ ತುಮಕೂರು ಬಳಿ ಭೀಕರ ಅಪಘಾತ

Spread the love

ತುಮಕೂರು: ಬೆಳ್ಳಂಬೆಳಗ್ಗೆ ಕೆಎಸ್‌ಆರ್​ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ದೊಡ್ಡಗುಣಿ ಸಮೀಪ ನಡೆದಿದೆ.

ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 10 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ.

ತುಮಕೂರು-ಶಿವಮೊಗ್ಗ ನ್ಯಾಷನಲ್ ಹೆದ್ದಾರಿ 206ರಲ್ಲಿ ಈ ಘಟನೆ ಸಂಭವಿಸಿದೆ. ಗಿರೀಶ್​ (37), ಮಾನ್ಯ (17), ಮೃತ ದುರ್ದೈವಿಗಳು. ಇವರಿಬ್ಬರೂ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.

ನಿಟ್ಟೂರು ಕಡೆಯಿಂದ ತುಮಕೂರು ಕಡೆಗೆ ಝೈಲೋ ಕಾರು ಬರುತ್ತಿದ್ದರೆ, ಬೆಂಗಳೂರು ಕಡೆಯಿಂದ ಶಿವಮೊಗ್ಗ ಕಡೆಗೆ ಹೋಗುತ್ತಿದ್ದ ಬಸ್ ಹೊರಟಿತ್ತು. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.


Spread the love

About Laxminews 24x7

Check Also

ಕಾವೇರಿ’ದ ಬಂದ್: ಸ್ಯಾಂಡಲ್​ವುಡ್​ ನಟ-ನಟಿಯರಿಂದ ಪ್ರತಿಭಟನೆ.

Spread the love ಬೆಂಗಳೂರು: ರಾಜ್ಯದೆಲ್ಲೆಡೆ ವಿವಿಧ ಸಂಘಟನೆಗಳಿಂದ ಕಾವೇರಿ ನೀರಿಗಾಗಿ ನಡೆಯುತ್ತಿರುವ ಬಂದ್​ಗೆ ಚಿತ್ರರಂಗ ಕೂಡ ಬೆಂಬಲ ನೀಡಿದೆ. ಕಾವೇರಿಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ