ಚಿಕ್ಕಮಗಳೂರು: ಕಾಂಗ್ರೆಸ್ ನಾಯಕರಾದ ಸೋನಿಯಾ, ರಾಹುಲ್ ಗಾಂಧಿ ಅವರಿಗೆ ಇಡಿ ಮೂಲಕ ಕಿರುಕುಳ ನೀಡಲಾಗುತ್ತಿದೆ ಎಂದು ಪ್ರಧಾನಿ ಮೋದಿ ಅವರ ಕರ್ನಾಟಕ ಭೇಟಿ ವಿರೋಧಿಸಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಹೊರಟ್ಟಿದ್ದ ಕಾಂಗ್ರೆಸ್ ಕಿಸಾನ್ ಘಟಕದ ಸಚಿನ್ ಮೀಗಾ ಸಹಿತ 23 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿಗೆ ಹೊರಡಲು ಸಿದ್ಧರಾಗಿ ನಗರದ ನಿರೀಕ್ಷಣಾ ಮಂದಿರಕ್ಕೆ ಬಂದಿದ್ದ ಸಚಿನ್ ಮೀಗಾ, ಸಿ.ಎನ್.ಅಕ್ಮಲ್, ರಸೂಲ್ ಖಾನ್, ಇತರರನ್ನು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.’ವಶಕ್ಕೆ ಪಡೆದಿರುವವರನ್ನು ನಿರೀಕ್ಷಣಾ ಮಂದಿರದ ಕೊಠಡಿಗಳಲ್ಲಿ ಅವರನ್ನು ಇರಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.