ಉಡುಪಿ : ಕಾಶಿಯಾತ್ರೆಗೆ ಹೋಗುವ ಭಕ್ತರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಜರಾಯಿ ಇಲಾಖೆ ವತಿಯಿಂದ ಭಕ್ತರಿಗೆ ಉಚಿತವಾಗಿ ಕಾಶಿಯಾತ್ರೆ ಯೋಜನೆ ಹಮ್ಮಿಕೊಳ್ಳಲಾಗಿದೆ.
ಉಡುಪಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ಬರುವ ಅಗಸ್ಟ್, ಶ್ರಾವಣ ಮಾಸದಲ್ಲಿ ರಾಜ್ಯದ 30,000 ಭಕ್ತರಿಗೆ ಉಚಿತವಾಗಿ ಕಾಶಿಯಾತ್ರೆ ಯೋಜನೆಯನ್ನು ಹಮ್ಮಿಕೊಳ್ಳಲಾಗಿದ್ದು, ಯಾತ್ರೆ ಕೈಗೊಳ್ಳುವವರ ಬ್ಯಾಂಕ್ ಖಾತೆಗೆ ಸರ್ಕಾರದ ವತಿಯಿಂದ 5000 ರೂ. ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.