Breaking News

2024ರ ಲೋಕಸಭೆ ಚುನಾವಣೆ ಬಳಿಕ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ: ಉಮೇಶ್ ಕತ್ತಿ

Spread the love

ಬೆಳಗಾವಿ: 2024ರ ಲೋಕಸಭೆ ಚುನಾವಣೆ ಬಳಿಕ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ ಎಂದು‌ ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗುವುದು ನಿಶ್ಚಿತ. 2024 ರ ಲೋಕಸಭಾ ಚುನಾವಣೆ ನಂತರ ಕರ್ನಾಟಕ 2 ರಾಜ್ಯವಾಗಲಿದೆ. ದೇಶದಲ್ಲಿ 50 ಹೊಸ ರಾಜ್ಯಗಳಾಗಲಿದ್ದು, ಈ ಕುರಿತು ಚರ್ಚೆ ಈಗಾಗಲೇ ನಡೆಯುತ್ತಿದೆ ಎಂದಿದ್ದಾರೆ. 

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗುವುದು ಖಚಿತ. ನಾವು ನೀವು ಸೇರಿ ಮಾಡೋಣ. ಮಹಾರಾಷ್ಟ್ರದಲ್ಲಿ 3, ಉತ್ತರ ಪ್ರದೇಶದಲ್ಲಿ 4, ಕರ್ನಾಟಕದಲ್ಲಿ 2 ರಾಜ್ಯಗಳಾಗಲಿವೆ. ಉತ್ತರ ಕರ್ನಾಟಕ ರಾಜ್ಯವಾಗಲೇಬೇಕು ಎಂದು ಹೇಳಿದ್ದಾರೆ.

ಬೆಂಗಳೂರಲ್ಲಿ ಕುಡಿಯಲು ನೀರಿಲ್ಲ. ಬೆಂಗಳೂರು ಟ್ರಾಫಿಕ್ ಜಾಮ್ ಹೇಳತೀರದು. 10 ಕಿಮೀ ಹೋಗಲು 1 ತಾಸು ಬೇಕು. ನನ್ನ ಮನೆಯಿಂದ ವಿಧಾನಸೌಧಕ್ಕೆ ಹೋಗಲು ಒಂದೂವರೆ ಗಂಟೆ ಬೇಕು. ನಡೆದುಕೊಂಡು ಹೋದರೆ ಅದಕ್ಕಿಂತ ಬೇಗ ಹೋಗಬಹುದು. ಸದ್ಯ ಬೆಳಗಾವಿಯಲ್ಲಿ ವಿಧಾನಸೌಧ ಆಗಿದೆ. ಹುಬ್ಬಳ್ಳಿ-ಧಾರವಾಡದಲ್ಲಿ ಹೈಕೋರ್ಟ್ ಆಗಿದೆ. ಕಿತ್ತೂರಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಚರ್ಚೆ ನಡೆದಿದೆ. ಹಾಗಾಗಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲು ಎಲ್ಲ ಸೌಲಭ್ಯಗಳಿವೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ