Breaking News

ಮಹಾರಾಷ್ಟ್ರದ ರಾಜಕೀಯ ಪರಿಸ್ಥಿತಿಯು ವಿಧಾನಸಭೆಯ ವಿಸರ್ಜನೆಯತ್ತ ಸಾಗುತ್ತಿದೆ: ಸಂಜಯ್ ರಾವತ್’ ಸುಳಿವು

Spread the love

ಮುಂಬೈ : ಶಿವಸೇನೆ ನಾಯಕ ಹಾಗೂ ಸಂಪುಟ ಸಚಿವ ಏಕನಾಥ್ ಶಿಂಧೆ ಕರೆ ನೀಡಿದ್ದ ಬಂಡಾಯ ಕೊನೆಗೂ ಯಶಸ್ವಿಯಾಗಿದೆ. ಯಾಕಂದ್ರೆ, ಈಗ ವಿಧಾನಸಭೆ ವಿಸರ್ಜನೆಯತ್ತ ಸಾಗುತ್ತಿದೆ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಟ್ವೀಟ್ ಮಾಡಿದ್ದಾರೆ. ಆದ್ದರಿಂದ, ಠಾಕ್ರೆ ಸರ್ಕಾರದ ಅಂತಿಮವಾಗಿ ಎರಡೂವರೆ ವರ್ಷಗಳಲ್ಲಿ ಅಂತ್ಯಗೊಂಡಿದೆ.

 

ಏಕನಾಥ್ ಶಿಂಧೆ ಶಿವಸೇನೆ ವಿರುದ್ಧ ದೊಡ್ಡ ಬಂಡಾಯವನ್ನೇ ಆರಂಭಿಸಿದ್ದಾರೆ. ಎಲ್ಲಾ ಶಾಸಕರೊಂದಿಗೆ ಶಿಂಧೆ ಈಗ ಗುವಾಹಟಿಯಲ್ಲಿ ತಂಗಿದ್ದು, ಏಕನಾಥ್ ಶಿಂಧೆ 33 ಶಾಸಕರ ಸೇನೆಯನ್ನ ಹೊಂದಿದ್ದಾರೆ. ಏಕನಾಥ್ ಶಿಂಧೆ ಇಂದು ರಾಜ್ಯಪಾಲರನ್ನ ಭೇಟಿ ಮಾಡಿ ಪ್ರಸ್ತಾವನೆ ಸಲ್ಲಿಸುವ ಸಾಧ್ಯತೆ ಇದೆ. ಶಿವಸೇನೆ ಸಂಸದ ಸಂಜಯ್ ರಾವತ್ ಈಗ ಅದಕ್ಕೆ ಕೈ ಹಾಕಿದ್ದಾರೆ.

ಸಂಜಯ್ ರಾವುತ್ ಅವ್ರು ಠಾಕ್ರೆ ಸರ್ಕಾರದ ಪತನದ ಸುಳಿವು ನೀಡಿದ್ದು, ಮಹಾರಾಷ್ಟ್ರದ ರಾಜಕೀಯ ಪರಿಸ್ಥಿತಿಯು ವಿಧಾನಸಭೆಯ ವಿಸರ್ಜನೆಯತ್ತ ಸಾಗುತ್ತಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ