Breaking News

ಯಾರು ಸ್ತ್ರೀಯರಿಗೆ ಅಪಮಾನ ಮಾಡುತ್ತಾರೋ ಅವರ ಪತನ ನಿಶ್ಚಿತ – ಕಂಗನಾ

Spread the love

ಮುಂಬೈ: ಮಹಾ ವಿಕಾಸ ಅಘಾಡಿ ಸರ್ಕಾರ ಪತನಗೊಳ್ಳುತ್ತಿದ್ದಂತೆ ಬಾಲಿವುಡ್ ನಟಿ ಕಂಗನಾ ರಣಾವತ್ ಈ ಹಿಂದೆ ಹೇಳಿದ್ದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಸುಶಾಂತ್ ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕಂಗನಾ ರಣಾವತ್ ಕಿಡಿಕಾರಿದ್ದರು. ಈ ತಿಕ್ಕಾಟ ಜೋರಾದ ಸಮಯದಲ್ಲೇ ಕಂಗನಾ ರಣಾವತ್ ಮನೆ ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಈ ಹಿಂದೆ ಬಿಎಂಸಿ ಮನೆಯನ್ನು ಕೆಡವಿತ್ತು. ಇದಕ್ಕೆ ಅಂದು ತಿರುಗೇಟು ಕೊಟ್ಟಿದ್ದ ನಟಿ, ನೆನಪಿರಲಿ ಉದ್ಧವ್ ಠಾಕ್ರೆಜೀ ಇಂದು ನನ್ನ ಮನೆ ಕೆಡವಿದ್ದೀರಿ. ನೋಡುತ್ತಾ ಇರಿ. ಮುಂದೊಂದು ದಿನ ನಿಮ್ಮ ದುರಹಂಕಾರ ಕೂಡ ನಾಶವಾಗುತ್ತದೆ ಎಂದಿದ್ದರು. 

ಈ ವೀಡಿಯೋದ ಜೊತೆ ಮತ್ತೊಂದು ವೀಡಿಯೋ ವೈರಲ್ ಆಗುತ್ತಿದೆ. ನೀವು ನಮ್ಮ ಇತಿಹಾಸದಲ್ಲಿ ಗಮನಿಸಿರಬಹುದು, ಯಾರು ಸ್ತ್ರೀಯರಿಗೆ ಅಪಮಾನ ಮಾಡುತ್ತಾರೋ ಅವರ ಪತನ ನಿಶ್ಚಿತವಾಗಿರುತ್ತದೆ. ಇದಕ್ಕೆ ಸಾಕ್ಷಿ ಎಂಬಂತೆ ಸೀತೆಗೆ ಅವಮಾನ ಮಾಡಿದ ರಾವಣ, ದ್ರೌಪದಿಗೆ ಅವಮಾನ ಮಾಡಿದ ಕೌರವರು ನಾಶವಾದರು


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ