ಮುಂಬೈ: ಮಹಾ ವಿಕಾಸ ಅಘಾಡಿ ಸರ್ಕಾರ ಪತನಗೊಳ್ಳುತ್ತಿದ್ದಂತೆ ಬಾಲಿವುಡ್ ನಟಿ ಕಂಗನಾ ರಣಾವತ್ ಈ ಹಿಂದೆ ಹೇಳಿದ್ದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಸುಶಾಂತ್ ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕಂಗನಾ ರಣಾವತ್ ಕಿಡಿಕಾರಿದ್ದರು. ಈ ತಿಕ್ಕಾಟ ಜೋರಾದ ಸಮಯದಲ್ಲೇ ಕಂಗನಾ ರಣಾವತ್ ಮನೆ ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಈ ಹಿಂದೆ ಬಿಎಂಸಿ ಮನೆಯನ್ನು ಕೆಡವಿತ್ತು. ಇದಕ್ಕೆ ಅಂದು ತಿರುಗೇಟು ಕೊಟ್ಟಿದ್ದ ನಟಿ, ನೆನಪಿರಲಿ ಉದ್ಧವ್ ಠಾಕ್ರೆಜೀ ಇಂದು ನನ್ನ ಮನೆ ಕೆಡವಿದ್ದೀರಿ. ನೋಡುತ್ತಾ ಇರಿ. ಮುಂದೊಂದು ದಿನ ನಿಮ್ಮ ದುರಹಂಕಾರ ಕೂಡ ನಾಶವಾಗುತ್ತದೆ ಎಂದಿದ್ದರು.
ಈ ವೀಡಿಯೋದ ಜೊತೆ ಮತ್ತೊಂದು ವೀಡಿಯೋ ವೈರಲ್ ಆಗುತ್ತಿದೆ. ನೀವು ನಮ್ಮ ಇತಿಹಾಸದಲ್ಲಿ ಗಮನಿಸಿರಬಹುದು, ಯಾರು ಸ್ತ್ರೀಯರಿಗೆ ಅಪಮಾನ ಮಾಡುತ್ತಾರೋ ಅವರ ಪತನ ನಿಶ್ಚಿತವಾಗಿರುತ್ತದೆ. ಇದಕ್ಕೆ ಸಾಕ್ಷಿ ಎಂಬಂತೆ ಸೀತೆಗೆ ಅವಮಾನ ಮಾಡಿದ ರಾವಣ, ದ್ರೌಪದಿಗೆ ಅವಮಾನ ಮಾಡಿದ ಕೌರವರು ನಾಶವಾದರು