Breaking News
Home / ರಾಜಕೀಯ / ಅಗ್ನಿ ಪಥ್ ಯೋಜನೆಯನ್ನು ವಿರೋಧಿಸಿ ಹೋರಾಟಕ್ಕೆ ಭಾರತೀಯ ಕೃಷಿಕ ಸಮಾಜ ರೈತ ಸಂಘಟನೆ ಬೆಂಬಲ

ಅಗ್ನಿ ಪಥ್ ಯೋಜನೆಯನ್ನು ವಿರೋಧಿಸಿ ಹೋರಾಟಕ್ಕೆ ಭಾರತೀಯ ಕೃಷಿಕ ಸಮಾಜ ರೈತ ಸಂಘಟನೆ ಬೆಂಬಲ

Spread the love

ಇತ್ತೀಚೆಗೆ ಕೇಂದ್ರ ರಕ್ಷಣಾ ಇಲಾಖೆ ಜಾರಿಗೆ ತಂತ ಅಗ್ನಿ ಪಥ್ ಯೋಜನೆಯನ್ನು ವಿರೋಧಿಸಿ ದೇಶವ್ಯಾಪಿ ನಡೆಯುತ್ತಿರುವ ಹೋರಾಟಕ್ಕೆ ಭಾರತೀಯ ಕೃಷಿಕ ಸಮಾಜ ರೈತ ಸಂಘಟನೆ ಬೆಂಬಲವನ್ನು ವ್ಯಕ್ತಪಡಿಸಿದೆ. ಇಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿಯನ್ನು ಸಲ್ಲಿಸಿದರು.

ಕೇಂದ್ರ ರಕ್ಷಣಾ ಇಲಾಖೆ ನೂತನವಾಗಿ ಜಾರಿಗೊಳಿಸಿರುವ ಅಗ್ನಿಪಥ್ ಯೋಜನೆಯನ್ನು ವಿರೋಧಿಸಿ ದೇಶಾದ್ಯಂತ ಅನೇಕ ಕಡೆಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಈ ಹೋರಾಟಕ್ಕೆ ರೈತ ಸಂಘಟನೆಗಳು, ಪಕ್ಷಾತೀತವಾಗಿ ರಾಜಕೀಯ ಸಂಘಟನೆಗಳು, ಕಾರ್ಮಿಕ ಮಹಿಳಾ ಯುವಜನ ಸಂಘಟನೆಗಳು ಬೆಂಬಲವನ್ನು ವ್ಯಕ್ತಪಡಿಸುತ್ತಿವೆ.

ಇಂದು ಬೆಳಗಾವಿ ನಗರದಲ್ಲಿ ಭಾರತೀಯ ಕೃಷಿಕ ಸಮಾಜ ರೈತ ಸಂಘಟನೆ ಕೂಡ ಈ ಹೋರಾಟಕ್ಕೆ ತನ್ನ ಬೆಂಬಲವನ್ನು ವ್ಯಕ್ತಪಡಿಸಿದೆ. ಈ ವೇಳೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಭಾರತೀಯ ಕೃಷಿಕ ಸಮಾಜದ ಸದಸ್ಯರು ಅಗ್ನಿಪಥ್ ವಿರೋಧಿಸಿ ನಡೆದ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಪ್ರತಿಭಟನೆಯನ್ನು ನಡೆಸಿದರು. ಈ ವೇಳೆ ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿದರು. ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಅಗ್ನಿಪಥ್ ಯೋಜನೆಯನ್ನು ಕೂಡಲೇ ಕೈಬಿಡುವಂತೆ ಮನವಿಯನ್ನು ಸಲ್ಲಿಸಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ