Breaking News

ಸಿಬಿಐನಿಂದ ಹೊಸ ನೋಟಿಸ್ : ಹಾಜರಾಗ್ತೇನೆ ಎಂದ ಡಿ ಕೆ ಶಿವಕುಮಾರ್

Spread the love

ಬೆಂಗಳೂರು : ಸಿಬಿಐನಿಂದ ಹೊಸ ನೋಟಿಸ್ ಕೊಟ್ಟಿದ್ದಾರೆ. ಚಾರ್ಜ್‌ಶೀಟ್ ಆದ ಮೇಲೆ ಕೋರ್ಟ್​ಗೆ ಹೋಗಬೇಕು. ನಮ್ಮ ನಾಯಕರನ್ನ ಇಡಿ ಇನ್ನೂ ವಿಚಾರಣೆ ನಡೆಸ್ತಿದೆ. ಅವರು ಪ್ರಶ್ನೆ ಮಾಡಲಿ, ತೊಂದರೆಯಿಲ್ಲ. ಐದು ದಿನ ವಿಚಾರಣೆ ಮಾಡುವ ಅವಶ್ಯಕತೆ ಏನಿತ್ತು?. ನನಗೆ 3 ತಿಂಗಳ ಹಿಂದೆಯೇ ಚಾರ್ಜ್‌ಶೀಟ್ ಹಾಕಬೇಕಿತ್ತು. ಆದರೆ, ಈಗ ಚಾರ್ಜ್‌ಶೀಟ್ ಹಾಕಿದ್ದಾರೆ. ಐದು ಜನರಿಗೆ ಸಮನ್ಸ್ ಕೊಟ್ಟಿದ್ದಾರೆ. ಕಾನೂನು ಇದೆ,‌ ಅದನ್ನ ಗೌರವಿಸೋಣ. ಜುಲೈ 1ರಂದು ನ್ಯಾಯಾಲಯಕ್ಕೆ ಹಾಜರಾಗ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದರು.

ನನಗೆ ಮತ್ತು ನಮ್ಮ ರಾಷ್ಟ್ರೀಯ ನಾಯಕರಿಗೆ ಇನ್ನು ಇಡಿಯವರು ಪ್ರಶ್ನೆ ಮಾಡ್ತಿದ್ದಾರೆ. ಸೋನಿಯಾ ಗಾಂಧಿಯವರು ಟೈಮ್ ಕೇಳಿದ್ದಾರೆ. ಅವರು ಪ್ರಶ್ನೆ ಮಾಡಲಿ. ಐದು ದಿನ ಪ್ರಶ್ನೆ ಮಾಡುವಂತಹದ್ದು ನನಗೆ ಅರ್ಥವಾಗ್ತಿಲ್ಲ. ನಮಗೆ ನ್ಯಾಯ ದೊರಕುತ್ತದೆ ಅನ್ನೋ ವಿಶ್ವಾಸವಿದೆ. ನನಗೆ ಆರು ತಿಂಗಳಲ್ಲಿ ಚಾರ್ಜ್‌ಶೀಟ್ ಹಾಕಬೇಕಿತ್ತು. ನೋಡೋಣ ಯಾವಾಗ ಮಾಡ್ತಾರೋ.. ಅದೇನು ಉತ್ತರ ಕೊಡಬೇಕು ಕೊಡ್ತೀನಿ. ಇದು ಹೊಸ ನೋಟಿಸ್, ಕೊಡಲಿ ನೋಡೋಣ ಎಂದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ