Breaking News

ಬಾಳ ಠಾಕ್ರೆ ತರ ಅವ್ರ ಮಗ ಇಲ್ಲ, ನನಗೆ ಗೊಟ್ಟಿದಷ್ಟು ಮಹಾರಾಷ್ಟ್ರ ಬಗ್ಗೆ ಯಾರಿಗೂ ಗೊತ್ತಿಲ್ಲ: ಸಂಜಯ್ ಪಾಟೀಲ್

Spread the love

ಉದ್ಧವ್ ಠಾಕ್ರೆ ಭಾವನಾತ್ಮ ವ್ಯಕ್ತಿ. ಅವರಿಗೆ ರಾಜಕೀಯ ಗೊತ್ತಿಲ್ಲ. ಹೀಗಾಗಿ ಇದನ್ನು ಶರದ್ ಪವಾರ್ ಸರಿಯಾಗಿ ಉಪಯೋಗ ತಿಳಿದುಕೊಳ್ಳುತ್ತಿದ್ದಾರೆ. 50 ಶಾಸಕರು ಹೋದವರಲ್ಲಿ 10 ಜನ ಪಕ್ಷೇತರರು ಹೋಗಿದ್ದಾರೆ. ಅದರಲ್ಲಿ ಶರದ್ ಪವಾರ್ ಕಟ್ಟಾ ಬೆಂಬಲಿಗರಿದ್ದಾರೆ ಎಂದು ಮಾಜಿ ಶಾಸಕ ಸಂಜಯ್ ಪಾಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಬೆಳಗಾವಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ್ ಪಾಟೀಲ್ ತಮ್ಮ ಸ್ವಾರ್ಥಕ್ಕಾಗಿ, ಅಧಿಕಾರ ಬರುತ್ತಿದೆ, ಮುಖ್ಯಮಂತ್ರಿ ಆಗಬೇಕು ಎಂದು ಬಾಳಾಸಾಹೇಬ ಠಾಕ್ರೆ ಅವರ ವಿಚಾರಧಾರೆಗಳಿಗೆ ತೀಲಾಂಜಲಿ ಇಟ್ಟು ಕಾಂಗ್ರೆಸ್ ಮತ್ತು ಎನ್‍ಸಿಪಿ ಜೊತೆ ಕೈ ಜೋಡಿಸಿದ್ದಾರೆ.

ನನ್ನ ಜೀವ ಇರೋವರೆಗೂ ಕಾಂಗ್ರೆಸ್ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ತಮ್ಮ ಭಾಷಣದಲ್ಲಿ ಅದೆಷ್ಟೋ ಬಾರಿ ಬಾಳಾಸಾಹೇಬ ಠಾಕ್ರೆ ಹೇಳಿದ್ದರು. ಬಾಳಾಸಾಹೇಬ ಠಾಕ್ರೆ ಅವರು ಕಾಂಗ್ರೆಸ್ ಪಕ್ಷ ಹಾಗೂ ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಟೀಕೆ ಮಾಡಿದ ವಿಡಿಯೋಗಳು ಸಾಕಷ್ಟು ವೈರಲ್ ಆಗಿದೆ. ಶಿವಸೇನೆ ಮತ್ತು ಬಿಜೆಪಿ ಹಿಂದುತ್ವದ ಮೇಲೆ ಇರುವ ಪಕ್ಷಗಳು. ಆದರೆ ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಆಗಬೇಕು ಎಂಬ ಉದ್ದೇಶದಿಂದ ಅನೈತಿಕ ಘಟಬಂಧನ ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದರು.

 


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ