Breaking News

ಕಾಂಗ್ರೆಸ್ ಅವರಿಗೆ ಅರಿವು ಇಲ್ಲದೆ ಸುಮ್ಮನೆ ಪ್ರತಿಭಟನೆ ಮಾಡುತ್ತಿದ್ದಾರೆ

Spread the love

ಅಥಣಿ(ಬೆಳಗಾವಿ): ಪ್ರಧಾನಿ ನರೇಂದ್ರ ಮೋದಿ ಅವರು ಈ ದೇಶದ ಯುವಕರ ನಿರುದ್ಯೋಗ ಹೋಗಲಾಡಿಸಲು ಅಗ್ನಿಪಥ್ ಯೋಜನೆಯನ್ನು ಅನುಷ್ಠಾನ ಮಾಡಿದ್ದಾರೆ. ಕಳೆದ 30 ವರ್ಷದ ಹಿಂದೆಯೇ ಕಾಂಗ್ರೆಸ್ ಸರ್ಕಾರ ಈ ಯೋಜನೆ ರೂಪಿಸಿತ್ತು. ಆದರೆ ನಮ್ಮ ಸರ್ಕಾರ ಇದನ್ನು ಜಾರಿಗೆ ತರುತ್ತಿದೆ. ಆದರೆ ಕಾಂಗ್ರೆಸ್ ಅವರಿಗೆ ಅರಿವು ಇಲ್ಲದೆ ಸುಮ್ಮನೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಲಕ್ಷ್ಮಣ್ ಸವದಿ ಹೇಳಿದರು.

ಅವರು ಅಥಣಿ ಪಟ್ಟಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ. ಅಗ್ನಿಪಥ್ ಯೋಜನೆಯಿಂದ ಚಿಕ್ಕ ವಯಸ್ಸಿನಲ್ಲೇ ನಾಲ್ಕು ವರ್ಷ ದೇಶ ಸೇವೆ ಮಾಡುತ್ತಾರೆ. ತಮ್ಮ ಜೀವನ ರೂಪಿಸಿಕೊಳ್ಳಲು ಒಂದು ಯೋಜನೆ ಇದಾಗಿದೆ ಮತ್ತು ದೇಶ ಸೇವೆ ಸಲ್ಲಿಸಲು ಅವಕಾಶ ಸಿಗುತ್ತದೆ. ಕೆಲವು ರಾಷ್ಟ್ರಗಳಲ್ಲಿ ದೇಶ ಸೇವೆಗೆ ಇಂತಿಷ್ಟು ವರ್ಷಗಳ ಕಾಲ ಸೇನೆಯಲ್ಲಿ ಕೆಲಸ ಮಾಡುವ ಕಾನೂನು ಜಾರಿಯಲ್ಲಿದೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ