ನಾನು ಹಿರಿಯ ಶಾಸಕ.ತಾಲ್ಲೂಕಿನ ಪೋಲಕಪಳ್ಳಿಯಲ್ಲಿ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘2024ರ ನಂತರ ದೇಶದಲ್ಲಿ ರಾಜ್ಯಗಳ ಸಂಖ್ಯೆ ಹೆಚ್ಚಾಗಲಿವೆ. ಉತ್ತರ ಪ್ರದೇಶ 4, ಮಹಾರಾಷ್ಟ್ರ 3, ಕರ್ನಾಟಕ 2 ರಾಜ್ಯಗಳಾಗಲಿವೆ. ಉತ್ತರ ಕರ್ನಾಟಕ ರಾಜ್ಯದ ಹೇಳಿಕೆಗೆ ನಾನು ಬದ್ಧ. ಆದರೆ ನಾನು ಅಖಂಡ ಕರ್ನಾಟಕದ ಮುಖ್ಯಮಂತ್ರಿ ಆಗುವೆ’ ಎಂದು ಬಯಕೆ ವ್ಯಕ್ತಪಡಿಸಿದರು.
‘ಕುಂಚಾವರಂ ವನ್ಯಜೀವಿ ಧಾಮದಲ್ಲಿರುವ ಶೇರಿಭಿಕನಳ್ಳಿ ಗ್ರಾಮವನ್ನು ಮುಂದಿನ 6 ತಿಂಗಳಲ್ಲಿ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದರು.
ಚಿಂಚೋಳಿಯಲ್ಲಿ ಅರಣ್ಯ ಕಾಲೇಜು ಮಂಜೂರು ಮಾಡುವ ಭರವಸೆ ನೀಡಿದ ಸಚಿವರು, ಜತೆಗೆ ಚಂದ್ರಂಪಳ್ಳಿಯಲ್ಲಿ ₹ 2 ಕೋಟಿ ವೆಚ್ಚದಲ್ಲಿ ಜಂಗಲ್ ಲಾಡ್ಜ್ ಮತ್ತು 4 ಕಾಟೇಜು ನಿರ್ಮಿಸಿ ಪ್ರವಾಸೋದ್ಯಮಕ್ಕೆ ಒತ್ತು ನೀಡಲಾಗುವುದು, ಇವುಗಳಿಗೆ ಮುಂದಿನ ತಿಂಗಳು ಅಡಿಗಲ್ಲು ನೆರವೇರಿಸಲಾಗುವುದು. ಈ ಭಾಗದ ಅಭಿವೃದ್ದಿಗೆ ಎಲ್ಲಾ ರೀತಿಯ ಸಹಕಾರ ನೀಡುವೆ ಎಂದು ಭರವಸೆ ನೀಡಿದರು.