Breaking News

ಬಡವರ ಕಲ್ಯಾಣ ಕೇಂದ್ರ ಸರ್ಕಾರದ ಆಶಯ: ಸಚಿವ ಸೋಮ ಪ್ರಕಾಶ

Spread the love

ಬೆಳಗಾವಿ: ಕೇಂದ್ರ ಸರ್ಕಾರವು ಕಳೆದ ಎಂಟು ವರ್ಷಗಳ ಅವಧಿಯಲ್ಲಿ ಬಡವರು ಹಾಗೂ ರೈತರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಇದರಿಂದ ದೇಶವು ಆರ್ಥಿಕ ಪ್ರಾಬಲ್ಯದತ್ತ ದಾಪುಗಾಲು ಹಾಕುತ್ತಿದೆ ಎಂದು ಕೇಂದ್ರ‌ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ರಾಜ್ಯ ಸಚಿವ ಸೋಮ‌ ಪ್ರಕಾಶ ಹೇಳಿದರು.

 

ಸರ್ಕಾರ ಎಂಟು ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದ ಸೆಂಟ್ರಲ್ ಸಭಾಂಗಣದಲ್ಲಿ ಆಯೋಜಿಸಿದ, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಫಲಾನುಭವಿಗಳ ಜತೆ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

2014ಕ್ಕಿಂತ ಮುಂಚಿತವಾಗಿ ದೇಶದಲ್ಲಿ ಇದ್ದ ಪರಿಸ್ಥಿತಿ ಈಗ ಸಂಪೂರ್ಣ ಭಿನ್ನವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಹೊಸಭರವಸೆ ಎಲ್ಲರಲ್ಲಿ ಗರಿಗೆದರಿವೆ. ಸೇವೆ, ಉತ್ತಮ ಆಡಳಿತ ಹಾಗೂ ಬಡವರ ಕಲ್ಯಾಣ ಎಂಬ ಧ್ಯೇಯದೊಂದಿಗೆ ದೇಶವನ್ನು ವಿಶ್ವಗುರುವಾಗಿಸಲು ಸಂಕಲ್ಪ ಮಾಡಲಾಗಿದೆ ಎಂದರು.

ಸ್ಟಾರ್ಟ್‌ಅಪ್ ಕೈಗಾರಿಕೆಗಳಿಂದ ದೇಶದ ಔದ್ಯೋಗಿಕ ರಂಗದಲ್ಲಿ ವಿಕಾಸವಾಗುತ್ತಿದೆ ಎಂದರು.


Spread the love

About Laxminews 24x7

Check Also

ಬಿಕ್ಲು ಶಿವ ಹತ್ಯೆ ಪ್ರಕರಣ: ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

Spread the loveಬೆಂಗಳೂರು: ರೌಡಿಶೀಟರ್‌ ಶಿವಪ್ರಕಾಶ್‌ ಅಲಿಯಾಸ್‌ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬಿಜೆಪಿ ಶಾಸಕ ಬೈರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ