ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಎಪ್ಪತ್ತೈದನೇ ವರ್ಷದ ( ಅಮೃತ ಮಹೋತ್ಸವ ) ಹುಟ್ಟು ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಅವರ ಆಪ್ತ ಬಣ ಸಂಚಾಲನ ಸಮಿತಿ ರಚನೆ ಮಾಡಿರುವುದು ಕಾಂಗ್ರೆಸ್ ವಲಯದಲ್ಲಿ ಡವಡವ ಸೃಷ್ಟಿಸಿದೆ.
ಆ. 3 ರಂದು ದಾವಣೆಗೆರೆಯಲ್ಲಿ ಆಯೋಜಿಸಿರುವ ಈ ಅಮೃತ ಮಹೋತ್ಸವ ಕಾರ್ಯಕ್ರಮ ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ವೇದಿಕೆ ಎಂದೇ ಕಾಂಗ್ರೆಸಿಗರು ವಿಶ್ಲೇಷಣೆ ನಡೆಸುತ್ತಿದ್ದಾರೆ. ಮೈಸೂರಿನಲ್ಲಿ ನಡೆಸಲು ಉದ್ದೇಶಿಸಿದ್ದ ಅಹಿಂದ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿದ್ದಕ್ಕೆ ಪರ್ಯಾಯವಾಗಿ ಈ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದೂ ವ್ಯಾಖ್ಯಾನಿಸಲಾಗುತ್ತಿದೆ.