Breaking News

ಒಂದು ಬಲಿ ಪಡೆದ ಭ್ರೂಣ ಹತ್ಯೆ ಪ್ರಕರಣ: ಕುಟುಂಬ ಕಲ್ಯಾಣಾಧಿಕಾರಿ ಅಧಿಕಾರ ಮೊಟಕು ಮಾಡಿದ ಡಿಸಿ

Spread the love

ಬೆಳಗಾವಿ- ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಯಾಗಿರುವ ಡಾ.ಎ.ವಿ.ಕಿವಡಸಣ್ಣವರ ಅವರು ನಿರ್ವಹಿಸುತ್ತಿದ್ದ ಕೆಪಿಎಂಇ ಮತ್ತು ಪಿಸಿ-ಪಿಎನ್ ಡಿಟಿ ಕಾರ್ಯವನ್ನು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಿ.ಎನ್.ತುಕ್ಕಾರ ಅವರಿಗೆ ಹಂಚಿಕೆ ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಆದೇಶ ಹೊರಡಿಸಿದ್ದಾರೆ.

 

ಮೂಡಲಗಿಯಲ್ಲಿ ಹಳ್ಳದಲ್ಲಿ ಭ್ರೂಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಇವರ ಕಾರ್ಯವೈಖರಿ ಸಮರ್ಪಕವಾಗಿರುವುದಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಆರೋಗ್ಯ ಇಲಾಖೆಗೆ ವರದಿ ಸಲ್ಲಿಸಿದ್ದರು.

ಕೆಪಿಎಂಇ ಮತ್ತು ಪಿಸಿ-ಪಿಎನ್ ಡಿಟಿ ಕಾರ್ಯವನ್ನು ಡಾ.ಕಿವಡಸನ್ನವರ ಅವರು ಸಮರ್ಪಕವಾಗಿ ನಿರ್ವಹಿಸಿ ಕಾಲಕಾಲಕ್ಕೆ ಸ್ಕ್ಯಾನಿಂಗ್ ಸೆಂಟರ್ ಹಾಗೂ ಆಸ್ಪತ್ರೆಗಳಿಗೆ ಭೇಟಿ ನೀಡದಿರುವುದರಿಂದ ಮೂಡಲಗಿಯಂತಹ ಘಟನೆಗಳು ಸಂಭವಿಸಿರುವುದು ಕಂಡುಬಂದಿರುತ್ತದೆ ಎಂದು ಜಿಲ್ಲಾಧಿಕಾರಿ ವರದಿಯಲ್ಲಿ ತಿಳಿಸಿದ್ದರು.


Spread the love

About Laxminews 24x7

Check Also

ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ

Spread the love ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ