Breaking News

ಏಕನಾಥ್​ ಶಿಂದೆಗೆ ಇಂದು ‘ಬಹುಮತ’ ಪರೀಕ್ಷೆ;

Spread the love

ಮುಂಬೈ (ಮಹಾರಾಷ್ಟ್ರ): ಉದ್ಧವ್​ ಠಾಕ್ರೆ ವಿರುದ್ಧ ಬಂಡೆದ್ದು ಬಿಜೆಪಿಯ ಬೆಂಬಲದಿಂದ ಮಹಾರಾಷ್ಟ್ರದ ಮುಖ್ಯಮಂತ್ರಿ ಆಗಿರುವ ಏಕನಾಥ್​ ಶಿಂದೆ ಇಂದು ವಿಶ್ವಾಸಮತದ ಅಗ್ನಿಪರೀಕ್ಷೆ ಎದುರಿಸುವರು. ನಿನ್ನೆಯಿಂದ ಆರಂಭವಾಗಿರುವ ವಿಶೇಷ ಅಧಿವೇಶನದ ಮೊದಲ ದಿನ ಸ್ಪೀಕರ್​ ಆಯ್ಕೆಯಲ್ಲಿ ಗೆದ್ದಿದ್ದ ಶಿಂದೆ ಇಂದಿನ ಪರೀಕ್ಷೆಯಲ್ಲೂ ಸಲೀಸಾಗಿ ಜಯಿಸಲಿದ್ದಾರೆ.

ವಿಶ್ವಾಸಮತವನ್ನು ಗೆಲ್ಲಲು ಬಿಜೆಪಿ ಮತ್ತು ಶಿವಸೇನೆ ಬಂಡಾಯ ಶಾಸಕರು ಸಭೆ ನಡೆಸಿ ರಣತಂತ್ರ ರೂಪಿಸಿದ್ದಾರೆ. ಏಕನಾಥ್​ ಶಿಂದೆ ಸರ್ಕಾರಕ್ಕೆ ಅಗತ್ಯ ಬಹುಮತ ಇರುವ ಕಾರಣ ಇಂದಿನ ವಿಶ್ವಾಸಮತ ನಾಮ್​ಕೇವಾಸ್ಥೆ ನಡೆಯಲಿದೆ.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ 106 ಮತ್ತು ಬಂಡಾಯ ಶಿವಸೇನೆಯ ಬಣದ 39, ಸ್ವತಂತ್ರ ಅಭ್ಯರ್ಥಿಗಳು ಸೇರಿ ನೂತನ ಮುಖ್ಯಮಂತ್ರಿ ಶಿಂದೆಗೆ 164 ಶಾಸಕರ ಬಲವಿದೆ. ವಿಪಕ್ಷಗಳಾದ ಉದ್ಧವ್​​ ಠಾಕ್ರೆ ಬಣ, ಎನ್​ಸಿಪಿ, ಕಾಂಗ್ರೆಸ್​ ಸೇರಿದಂತೆ ಉಳಿದ ಪಕ್ಷಗಳು 112 ಸದಸ್ಯರಿದ್ದಾರೆ. ಬಹುಮತ ಸಾಬೀತಿಗೆ 144 ಮತಗಳು ಮಾತ್ರ ಬೇಕಾಗಿವೆ.


Spread the love

About Laxminews 24x7

Check Also

ಸರ್ಕಾರಿ ವೈದ್ಯರು, ನರ್ಸ್​ಗಳಿಗೆ ಗ್ರಾಮೀಣ ಸೇವೆ ಕಡ್ಡಾಯ

Spread the loveಬೆಂಗಳೂರು: ನಗರ ಪ್ರದೇಶಗಳಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ವೈದ್ಯರು, ನರ್ಸ್​ಗಳು ಸೇರಿದಂತೆ ಇತರ ಸಿಬ್ಬಂದಿ ಇನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ