Breaking News
Home / ರಾಜಕೀಯ / ಜು. 8ರ ವರೆಗೆ ರಾಜ್ಯಾದ್ಯಂತ ಉತ್ತಮ ಮಳೆ:

ಜು. 8ರ ವರೆಗೆ ರಾಜ್ಯಾದ್ಯಂತ ಉತ್ತಮ ಮಳೆ:

Spread the love

ಬೆಂಗಳೂರು: ರಾಜ್ಯಾದ್ಯಂತ ಮುಂದಿನ 5 ದಿನಗಳ ಕಾಲ (ಜು.8ರ ವರೆಗೆ) ಉತ್ತಮ ಮಳೆಯಾಗಲಿದೆ ಎಂದು ತಿಳಿಸಿರುವ ಹವಾಮಾನ ಇಲಾಖೆ, ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಮತ್ತು ಉಳಿದೆಡೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜು.5 ಮತ್ತು 6ರಂದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜು.8ರ ವರೆಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

ಬೆಂಗಳೂರು, ಮೈಸೂರು, ರಾಮನಗರ, ಮಂಡ್ಯ, ಚಾಮರಾಜನಗರ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು. ಚಿಕ್ಕಬಳ್ಳಾಪುರ, ಕೋಲಾರ, ಬೆಳಗಾವಿ, ಕಲಬುರಗಿ, ಬೀದರ್‌, ರಾಯಚೂರು ಮುಂತಾದ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಇದು ಜು.8ರ ವರೆಗೂ ಮುಂದುವರಿಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೆಆರ್‌ಎಸ್‌ಗೆ ಒಳ ಹರಿವು ಹೆಚ್ಚಳ
ಶ್ರೀರಂಗಪಟ್ಟಣ: ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯಕ್ಕೆ ಒಳ ಹರಿವು ಪ್ರಮಾಣ ಹೆಚ್ಚಾಗಿದ್ದು, ಕಳೆದ ವಾರದಿಂದ ಹೆಚ್ಚಿನ ನೀರು ಹರಿದು ಬರುತ್ತಿದೆ.

ಕೊಡಗು, ಭಾಗಮಂಡಲದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು ಕೆಆರ್‌ಎಸ್‌ ಜಲಾಶಯಕ್ಕೆ ಕಾವೇರಿ ನದಿ ಮೂಲಕ ರವಿವಾರ ಸಂಜೆ 14 ಸಾವಿರಕ್ಕೂ ಹೆಚ್ಚು ಕ್ಯೂಸೆಕ್‌ ನೀರು ಜಲಾಶಯಕ್ಕೆ ಹರಿದು ಬರುತ್ತಿತ್ತು.

ಕೊಡಗಿನಲ್ಲೂ ಮಳೆ ಚುರುಕಾಗಿರುವುದರಿಂದ ಜಲಾಶಯಕ್ಕೆ ಇನ್ನಷ್ಟು ನೀರು ಹರಿದು ಬರುವ ಸಾಧ್ಯತೆ ಹೆಚ್ಚಾಗಿದೆ. ಕಾವೇರಿ ಕಣಿವೆ ಪ್ರದೇಶದಲ್ಲಿ ಸತತ ಮಳೆಯಾಗುತ್ತಿರುವುದರಿಂದ ಕಡಿಮೆ ಹಂತಕ್ಕೆ ಇಳಿಕೆಯಾಗಿದ್ದ ಜಲಾಶಯದ ನೀರಿನ ಮಟ್ಟ ಈಗ ಸುಧಾರಣೆಯಾಗುತ್ತಿದೆ. ಈಗ ರೈತರ ಮೊಗದಲ್ಲಿ ಸಂತಸ ಮೂಡುತ್ತಿದೆ. ಕಳೆದ 4 ದಿನಗಳಿಂದಲೂ ಒಳ ಹರಿವು ಪ್ರಮಾಣ ಹೆಚ್ಚಿದ್ದು, ಜಲಾಶಯದ ಮಟ್ಟ 109 ಅಡಿಗೆ ಏರಿಕೆ ಕಂಡು ಬಂದಿದೆ.

ಕೊಡಗಿನಲ್ಲಿ ಉತ್ತಮ ಮಳೆ: ವಿವಿಧೆಡೆ ಹಾನಿ
ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆ
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆ ಯಾಗು ತ್ತಿದ್ದು ಕಿರು ತೊರೆ, ನದಿಗಳು ತುಂಬಿ ಹರಿಯುತ್ತಿವೆ. ಕಾವೇರಿ ನದಿಯ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಭಾಗಮಂಡಲದ ತ್ರಿವೇಣಿ ಸಂಗಮದ ವ್ಯಾಪ್ತಿಯ ರಸ್ತೆಗಳು ಜಲಾವೃತಗೊಂಡಿವೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ