ಬೆಳಗಾವಿ: ನಗರ ಪ್ರದೇಶದ ಶೈಕ್ಷಣಿಕ ವ್ಯವಸ್ಥೆಗೆ ಸರಿಸಮಾನ ಸೌಕರ್ಯಗಳನ್ನು ಗ್ರಾಮೀಣ ಭಾಗದ ಶಾಲೆಗಳೂ ಹೊಂದಿದಾಗ ವಿದ್ಯಾರ್ಥಿಗಳಲ್ಲಿ ಕೀಳರಿಮೆ ಹೋಗಿ ಸ್ಪರ್ಧಾತ್ಮಕ ಮನೋಭಾವ ಹೆಚ್ಚುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿ ಗ್ರಾಮದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಗೆ ಲಕ್ಷ್ಮೀ ತಾಯಿ ಫೌಂಡೇಶನ್ ವತಿಯಿಂದ 30 ಡೆಸ್ಕ್ ಗಳನ್ನು ವಿತರಿಸಿ ಅವರು ಮಾತನಾಡಿದರು. ಆಧುನಿಕ ಯುಗದಲ್ಲಿ ಶೈಕ್ಷಣಿಕ ವ್ಯವಸ್ಥೆಗಳನ್ನು ಸಬಲೀಕರಿಸಬೇಕಾದುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಶಾಲೆಗೆ ನೀಡಿದ ಸೌಕರ್ಯವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.