Breaking News

ಗುಡ್ಡ ಕುಸಿತ- ಕರ್ನಾಟಕ, ಗೋವಾ ಸಂಪರ್ಕಿಸುವ ರಸ್ತೆ 5 ಗಂಟೆ ಬಂದ್

Spread the love

ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರಕ್ಕೆ ಗೋವಾ ಸಮೀಪದ ಮಾಲಶೇಜ್ ಘಾಟ್‍ನಲ್ಲಿ ಗುಡ್ಡ ಕುಸಿದು, ಕರ್ನಾಟಕ ಸಂಪರ್ಕಿಸುವ ರಸ್ತೆ 5 ಘಂಟೆಗಳ ಕಾಲ ಬಂದ್ ಆಗಿತ್ತು. ಬಳಿಕ ಗೋವಾದ ಅಗ್ನಿಶಾಮಕ ದಳದ ಸಿಬ್ಬಂದಿ ಸತತ 5 ಗಂಟೆಗಳ ಕಾರ್ಯಾಚರಣೆ ನಡೆಸಿ ರಸ್ತೆ ಸುಗಮಗೊಳಿಸಿದ್ದಾರೆ.

ಮಹಾರಾಷ್ಟ್ರ ರಾಜ್ಯಕ್ಕೆ ಸೇರಿದ ಮಾಲಶೇಜ್ ಘಾಟ್ ಗೋವಾ ಸಮೀಪದಲ್ಲಿದೆ. ಪಶ್ಚಿಮ ಘಟ್ಟದಲ್ಲಿ ಮಳೆಯ ಆರ್ಭಟಕ್ಕೆ ಮಾಲಶೇಜ್ ಘಾಟ್‍ನಲ್ಲಿ ಗುಡ್ಡ ಕುಸಿತವಾಗಿತ್ತು. ಗುಡ್ಡ ಕುಸಿತದಿಂದ ಕರ್ನಾಟಕ-ಗೋವಾ ಸಂಪರ್ಕಿಸುವ ರಸ್ತೆಯಲ್ಲೂ ಸಂಚಾರ ಸಮಸ್ಯೆ ಉಂಟಾಗಿದ್ದು, ಅನ್ಮೋಡ್ ಘಾಟ್‍ನಲ್ಲಿ ಟ್ರಾಫಿಕ್ ಜಾಮ್ ಆಗಿ ಪ್ರಯಾಣಿಕರು ಪರದಾಡುವಂತಾಯಿತು.

ಗುಡ್ಡ ಕುಸಿತದ ಪರಿಣಾಮ ಮಣ್ಣು ಕಲ್ಲುಗಳು ಹೆದ್ದಾರಿಯನ್ನೇ ಆವರಿಸಿದ್ದು, ಸ್ಥಳಕ್ಕೆ ಗೋವಾದ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಆಗಮಿಸಿ ರಸ್ತೆ ಮೇಲೆ ಬಿದ್ದಿದ್ದ ಮಣ್ಣು-ಕಲ್ಲು ತೆರವು ಮಾಡಲು ಅಗ್ನಿಶಾಮಕ ಸಿಬ್ಬಂದಿ ಹೈರಾಣದರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ