Breaking News

ಗೌರಿ ಲಂಕೇಶ್ ಹತ್ಯೆ: ಕೊಲೆ ನೋಡಿದ ಮೊದಲ ಇಬ್ಬರು ಸಾಕ್ಷಿದಾರರು ಕೋರ್ಟ್​​​ಗೆ ಹಾಜರು

Spread the love

ಬೆಂಗಳೂರು : ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಪ್ರಕರಣ ಸಂಬಂಧ ವಿಚಾರಣೆ‌ ನಡೆಸುತ್ತಿರುವ ಕೋಕಾ ವಿಶೇಷ ನ್ಯಾಯಾಲಯ ಮುಂದೆ‌ ಇಂದು ಇಬ್ಬರು ಸಾಕ್ಷಿದಾರರು ಹಾಜರಾಗಿ ಹೇಳಿಕೆ ನೀಡಿದ್ದಾರೆ. ಜುಲೈ 4 ರಿಂದ 8 ರವರೆಗೆ ವಿಶೇಷ ನ್ಯಾಯಾಲಯ ಪ್ರಕರಣ ವಿಚಾರಣೆ ನಡೆಸುತ್ತಿದೆ.‌ ಎರಡು ದಿನಗಳ ಹಿಂದೆ ಗೌರಿ ಲಂಕೇಶ್ ಸಹೋದರಿ ಕವಿತಾ ಲಂಕೇಶ್ ಹಾಜರಾಗಿ‌ ಕೋರ್ಟ್ ಮುಂದೆ ಸಾಕ್ಷ್ಯ ನುಡಿದಿದ್ದರು.

ಇದರಂತೆ ಅಂದು ಸಂಜೆ ಬೈಕ್ ನಲ್ಲಿ ಅವರ ಮನೆಗೆ ಹೋಗಿದ್ದೆ, ಮನೆ ಬಳಿ ಹೋಗುತ್ತಿದ್ದಂತೆ ಗೌರಿ‌ ಲಂಕೇಶ್ ಮನೆಯಿಂದ ಏನೋ ಶಬ್ದ ಬಂದಿದೆ ನೋಡಿ ಎಂದು ಸ್ಥಳೀಯರು ಹೇಳಿದ್ದರು‌. ಆಗ ಗೇಟ್ ಮುಂಭಾಗದಲ್ಲಿ ನಿಂತಿದ್ದ ಕಾರಿನ ಡೋರ್ ಓಪನ್ ಆಗಿದ್ದನ್ನು ಗಮನಿಸಿದ್ದೆ.

ಗೇಟ್ ಒಳ ಹೋಗುತ್ತಿದ್ದಂತೆ ಮನೆ ಮುಂಭಾಗದಲ್ಲಿ ಗೌರಿ ಬಿದ್ದಿದ್ದರು. ಹತ್ತಿರ ಹೋಗುತ್ತಿದ್ದಂತೆ ಆಕೆಯ ಎದೆಯ ಭಾಗ ರಕ್ತದಿಂದ ತುಂಬಿತ್ತು’ ಎಂದು ವಿಶೇಷ ಅಭಿಯೋಜಕ ಎಸ್.ಬಾಲನ್ ಮುಂದೆ‌ ಹೇಳಿಕೆ ನೀಡಿದ್ದಾರೆ.

ಗೌರಿ ಲಂಕೇಶ್ ಮನೆ‌ ಮುಂಭಾಗದ ಅಪಾರ್ಟ್ ಮೆಂಟ್ ಔಟ್ ಹೌಸ್ ನಲ್ಲಿ ಪತ್ನಿಯೊಂದಿಗೆ ವಾಸವಾಗಿರುವ ಮೇಸ್ತ್ರಿ‌ ಮನೋಹರ್ ಎಂಬುವರು ನ್ಯಾಯಾಲಯದ ಮುಂದೆ‌ ಸಾಕ್ಷಿ ನುಡಿದಿದ್ದಾರೆ. ‘ಅಂದು ರಾತ್ರಿ ಕೆಲಸ ಮುಗಿಸಿ ಮನೆಯಲ್ಲಿ‌ ಊಟ ಮಾಡುವಾಗ ಗೌರಿ ಮನೆ ಕಡೆಯಿಂದ ಎರಡು ದಾಮ್ ದೂಮ್ ಎಂದು ಶಬ್ಧ ಬಂದಿತು.‌ ಕೂಡಲೇ ಬಾಲ್ಕನಿಗೆ ತೆರಳಿ ನೋಡಿರುವುದಾಗಿ’ ಮನೋಹರ್ ಹೇಳಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ