Breaking News

ಮಳೆಯ ಆರ್ಭಟ, ಚಿಕ್ಕೋಡಿ ತಾಲೂಕಿನ 4 ಸೇತುವೆಗಳು ಜಲಾವೃತ

Spread the love

ಮಹಾರಾಷ್ಟ್ರದ ಕೊಂಕಣ ಪ್ರದೇಶಗಳಲ್ಲಿ ‌ವರುಣರಾಯನ ಆರ್ಭಟ ‌ಮುಂದುವರದಿದೆ…ಇದರಿಂದಾಗಿ ಚಿಕ್ಕೋಡಿ ತಾಲೂಕಿನ 4 ಸೇತುವೆಗಳು ‌ಮುಳಗಡೆಯಾಗಿವೆ..

ಮಹಾರಾಷ್ಟ್ರದ ಕೊಂಕಣ ಪ್ರದೇಶಗಳಲ್ಲಿ ಮಳೆಯ ಆರ್ಭಟ‌ ಜೋರಾಗಿದೆ..ಪರಿಣಾಮವಾಗಿ ಇತ್ತ ಚಿಕ್ಕೋಡಿ ತಾಲೂಕಿನ ಕೃಷ್ಣಾ ಹಾಗೂ ಉಪನದಿಗಳಾದ ವೇದಗಂಗಾ, ದೂಧಗಂಗಾ ನದಿಗಳಿಗೆ ಕ್ಷಣಕ್ಷಣಕ್ಕೂ ನೀರಿನ ಮಟ್ಟ ಏರಿಕೆಯಾಗುತ್ತಿದೆ..ಅದಲ್ಲದೇ ಯಡೂರ-ಕಲ್ಲೋಳ,ಮಾಂಜರಿ-ಸೌಂದತ್ತಿ,ಮಲಿಕವಾಡ-ದತ್ತವಾಡ,ಯಕ್ಸಂಬಾ-ದಾನವಾಡ ಹೀಗೆ 4 ಕೆಳಹಂತದ ಸೇತುವೆಗಳು ಮುಳಗಡೆಯಾಗಿವೆ.

ಕೃಷ್ಣಾ,ವೇದಗಂಗಾ, ದೂಧಗಂಗಾ ನದಿಗಳಿಗೆ ಒಂದೇ ದಿನದಲ್ಲಿ 1 ಅಡಿಯಷ್ಟು ನೀರು ಏರಿಕೆಯಾಗಿದೆ.. ಪ್ರತಿ ವರ್ಷವೂ ಕೂಡಾ ಪ್ರವಾಹದಿಂದಾಗಿ ತತ್ತರಿಸಿಹೋಗಿರುವ ನದಿತೀರದ ಜನರಿಗೆ ಮತ್ತೆ ಪ್ರವಾಹ ಭೀತಿ‌ ಎದುರಾಗಿದೆ..ಇನ್ನೂ ಕೃಷ್ಣಾ ನದಿ ನೀರು ಹೆಚ್ಚಳ ಹಿನ್ನೆಲೆಯಲ್ಲಿ ರೈತರು ತಮ್ಮ ಪಂಪ್ ಸೆಟ್ ಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಹರಸಾಹಸವನ್ನು ಪಡುತ್ತಿದ್ದಾರೆ…


Spread the love

About Laxminews 24x7

Check Also

ಕನ್ನಡಪರ ಹೋರಾಟಗಾರರು ತಮ್ಮ ಸುಪುತ್ರನ ವಿವಾಹ ಸಮಾರಂಭದ ಆಮಂತ್ರಣ ಪತ್ರವನ್ನು ನೀಡಿದರು.

Spread the loveಹಿರಿಯ ಕನ್ನಡಪರ ಹೋರಾಟಗಾರರು, ಮಾಜಿ ಶಾಸಕ ವಾಟಾಳ್ ನಾಗರಾಜ್ ಅವರು ಇಂದು ಬೆಂಗಳೂರಿನ ಗೃಹಕಚೇರಿಯಲ್ಲಿ ಸಚಿವ ಸತೀಶ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ