Breaking News

ಬೈಕ್ ಹಿಡಿದು ಪೊಲೀಸ್ ಠಾಣೆಗೆ ತಂದು ವಿಮೆ ಮಾಡಿದ್ದಕ್ಕೆ ಸವಾರನೊಬ್ಬ ಪೊಲೀಸರ ಮುಂದೆಯೇ ಕಣ್ಣೀರಿಟ್ಟ

Spread the love

ರಾಯಚೂರು: ಜಿಲ್ಲಾ ಪೊಲೀಸರು ವಿಮೆ ಮಾಡಿಸದೆ ಓಡಿಸುತ್ತಿರುವ ಬೈಕ್ ಹಾಗೂ ಇತರ ವಾಹನಗಳನ್ನು ಹಿಡಿದು ವಿಮೆ ಮಾಡಿಸುತ್ತಿದ್ದಾರೆ. ವಿಮೆ ಇಲ್ಲದ್ದಕ್ಕೆ ಬೈಕ್ ಹಿಡಿದು ಪೊಲೀಸ್ ಠಾಣೆಗೆ ತಂದು ವಿಮೆ ಮಾಡಿದ್ದಕ್ಕೆ ಸವಾರನೊಬ್ಬ ಪೊಲೀಸರ ಮುಂದೆಯೇ ಕಣ್ಣೀರಿಟ್ಟ ಪ್ರಸಂಗ ನಡೆದಿದೆ.

ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಪೊಲೀಸರು ವಾಹನಗಳ ವಿಮೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈವರೆಗೆ 400ಕ್ಕೂ ಹೆಚ್ಚು ಬೈಕ್‍ಗಳನ್ನು ಜಪ್ತಿ ಮಾಡಿರುವ ಪೊಲೀಸರು ಎಲ್ಲಾ ಬೈಕ್‌ಗಳಿಗೂ ವಿಮೆ ಮಾಡಿಸಿದ್ದಾರೆ. ನಗರದ ಎಸ್‍ಪಿ ಕಚೇರಿ ಆವರಣದಲ್ಲಿ ಜಪ್ತಿಯಾದ ಎಲ್ಲಾ ಬೈಕ್‍ಗಳನ್ನು ನಿಲ್ಲಿಸಿ ವಿಮೆ ಮಾಡಿಸಲಾಗುತ್ತಿದೆ. ಪೊಲೀಸರು ವಾಹನಗಳಿಗೆ ವಿಮೆ ಮಾಡಿಸಿ ವಾಹನ ಸವಾರರಿಗೆ ಹಿಂದಿರುಗಿಸುತ್ತಿದ್ದಾರೆ. 

ಕಳೆದ ಒಂದು ವಾರದಿಂದ ದಂಡ ಹಾಕದೆ ವಾಹನಗಳನ್ನು ಹಿಡಿದು ವಿಮೆ ಮಾಡಿಸಲಾಗಿತ್ತು. ಇನ್ನುಮುಂದೆ ವಾಹನಗಳಿಗೆ ದಂಡ ವಿಧಿಸಿ ವಿಮೆ ಮಾಡಿಸಲಾಗುವುದು. ಹೀಗಾಗಿ ಎಲ್ಲಾ ವಾಹನಗಳ ಮಾಲೀಕರು ತಮ್ಮ ಒಳಿತಿಗಾಗಿ ವಿಮೆ ಮಾಡಿಸಿಕೊಳ್ಳುವಂತೆ ರಾಯಚೂರು ಎಸ್.ಪಿ ನಿಖಿಲ್ ಬಿ ಮನವಿ ಮಾಡಿಕೊಂಡಿದ್ದಾರೆ.


Spread the love

About Laxminews 24x7

Check Also

ಲಿಂಗಾಯತ ಬಿಸಿನೆಸ್ ಫೋರಮ್‌ (ಎಲ್‌ಬಿಎಫ್‌) ಉದ್ಯಮಿಗಳು, ವೃತ್ತಿಪರರು ಮತ್ತು ವ್ಯಾಪಾರ ನಾಯಕರ ಸಕ್ರಿಯ ವೇದಿಕೆ ಇತ್ತೀಚೆಗೆ ತನ್ನ 50ನೇ ಮಾಸಿಕ ಸಭೆಯನ್ನು ಅದ್ಧೂರಿಯಾಗಿ ಆಚರಿಸಿತು..

Spread the love ಲಿಂಗಾಯತ ಬಿಸಿನೆಸ್ ಫೋರಮ್‌ (ಎಲ್‌ಬಿಎಫ್‌) ಉದ್ಯಮಿಗಳು, ವೃತ್ತಿಪರರು ಮತ್ತು ವ್ಯಾಪಾರ ನಾಯಕರ ಸಕ್ರಿಯ ವೇದಿಕೆ ಇತ್ತೀಚೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ