Breaking News
Home / ಕೊರೊನಾವೈರಸ್ / ಬೆಳಗಾವಿ, ಹುಬ್ಬಳ್ಳಿ ಕಲ್ಯಾಣ ಜ್ಯುವೆಲರ್ಸ್ ಕಳ್ಳತನ:

ಬೆಳಗಾವಿ, ಹುಬ್ಬಳ್ಳಿ ಕಲ್ಯಾಣ ಜ್ಯುವೆಲರ್ಸ್ ಕಳ್ಳತನ:

Spread the love

ಹುಬ್ಬಳ್ಳಿ: ಗ್ರಾಹಕರ ಸೋಗಿನಲ್ಲಿ ಬೆಳಗಾವಿ, ಹುಬ್ಬಳ್ಳಿ, ದಾವಣಗೆರೆಯ ಕಲ್ಯಾಣ ಜ್ಯುವೆಲರಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಒಡವೆಗಳನ್ನು ಕದ್ದು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹುಬ್ಬಳ್ಳಿಯ ವಿಜಯನಗರದದ ನಿವಾಸಿ ವಿರಕ್ತಾನಂದ ಅಲಿಯಾಸ್ ಸಂತೋಷ್ ಮಹದೇವಪ್ಪ ಕಟಗಿ, ಗದಗದ ಶರತ್ ಶ್ರೀಕಾಂತ್ ಕಾರಂತ ಬಂಧಿತರು.

ಪೊಲೀರು ಬಂಧಿತರಿಂದ 8 ಲಕ್ಷ 27 ಸಾವಿರ ಮೌಲ್ಯದ 130.681 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿ ಅಂಗಡಿಯೊಂದರಲ್ಲಿ ಗ್ರಾಹಕರಂತೆ ಚಿನ್ನಾಭರಣ ಖರೀದಿಗೆಂದು ಬಂದು ಸಿಬ್ಬಂದಿಗೆ ಗೊತ್ತಾಗದಂತೆ ಚಿನ್ನಾಭರಣ ಕದ್ದು ಪರಾರಿಯಾಗಿದ್ದರು.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ, ಆರೋಪಿಗಳು ಸಿಕ್ಕಿ ಹಾಕಿಕೊಂಡಿದ್ದಾರೆ. ಪ್ರಮುಖ ಆರೋಪಿ ಮಹೇಶ್ ಬಾಣದ ತಲೆ ಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ – ಧಾರವಾಡ ಅರ್ಧ ದಿನ ಬಂದ್!

Spread the loveಧಾರವಾಡ: ಇಡೀ ದೇಶದ ಗಮನ ಸೆಳೆದಿರುವ ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಖಂಡಿಸಿ ಇಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ