ಯುಪಿಎಸ್ಸಿ ಪರೀಕ್ಷೆಯಲ್ಲಿ 319ನೇ ರ್ಯಾಂಕ್ ಪಡೆದ ಬೆಳಗಾವಿ ಜಿಲ್ಲೆಯ ಹೆಮ್ಮೆಯ ಪುತ್ರ ಗಜಾನನ ಶಂಕರ್ ಬಾಲೆ ಅವರಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಸತ್ಕರಿಸಿ ಗೌರವಿಸಿದರು.
ಕೇಂದ್ರ ಲೋಕಸೇವಾ ಆಯೋಗವು 2021ನೇ ಸಾಲಿನಲ್ಲಿ ನಡೆಸಿದ ನಾಗರಿಕ ಸೇವಾ ಪರೀಕ್ಷೆಯಲ್ಲಿ 319ನೇ ಯಾರ್ಂಕ್ ಪಡೆದಿರುವ ಬೆಳಗಾವಿ ಜಿಲ್ಲೆ ರಾಯಬಾಗ ತಾಲ್ಲೂಕಿನ ಕುಡಚಿಯ ಗಜಾನನ ಶಂಕರ್ ಬಾಲೆ ಅವರನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಶುಕ್ರವಾರ (ಜು.8) ತಮ್ಮ ಕಚೇರಿಯಲ್ಲಿ ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭದಲ್ಲಿ ಅಭ್ಯರ್ಥಿಯ ತಂದೆಯವರಾದ ಶಂಕರ್ ಬಾಲೆ ಉಪಸ್ಥಿತರಿದ್ದರು.