Breaking News
Home / ರಾಜಕೀಯ / ಗನ್​ಮ್ಯಾನ್​ಗೆ ಪಿಎಸ್​ಐ ಪಟ್ಟ? ಶಾಸಕನ ಪುತ್ರ, ಸಹೋದರನ ಸುತ್ತ ಅಕ್ರಮದ ಘಾಟು- ಬಾಯಿಬಿಟ್ಟ ಕಿಂಗ್​ಪಿನ್​

ಗನ್​ಮ್ಯಾನ್​ಗೆ ಪಿಎಸ್​ಐ ಪಟ್ಟ? ಶಾಸಕನ ಪುತ್ರ, ಸಹೋದರನ ಸುತ್ತ ಅಕ್ರಮದ ಘಾಟು- ಬಾಯಿಬಿಟ್ಟ ಕಿಂಗ್​ಪಿನ್​

Spread the love

ಅಫಜಲಪುರ (ಕಲಬುರಗಿ): ಪಿಎಸ್​ಐ ನೇಮಕಾತಿಯಲ್ಲಿ ನಡೆದಿರುವ ಅಕ್ರಮದ ಆಳಕ್ಕೆ ಹೋದಷ್ಟೂ ಹಲವು ಗಣ್ಯರ ಹೆಸರು ಹೊರಕ್ಕೆ ಬರುತ್ತಿದೆ. ಕೆಲ ದಿನಗಳ ಹಿಂದಷ್ಟೇ ಎಡಿಜಿಪಿ ಅಮೃತ್ ಪೌಲ್ ಅವರು ಈ ಕೇಸ್​ನಲ್ಲಿ ಸಿಲುಕಿಕೊಂಡಿದ್ದರು. ಇದೀಗ ಕಾಂಗ್ರೆಸ್​ ಶಾಸಕರೊಬ್ಬರ ಮಗ ಹಾಗೂ ಅವರ ಸಹೋದರ ಕೂಡ ಇದರಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

 

ಅಫಜಲಪುರದ ಕಾಂಗ್ರೆಸ್​ ಶಾಸಕ ಎಂ.ವೈ.ಪಾಟೀಲ್ ಪುತ್ರ ಅರುಣ್ ಪಾಟೀಲ್ ಹಾಗೂ ಶಾಸಕರ ಸಹೋದರ ಎಸ್.ವೈ.ಪಾಟೀಲ್​ಗೆ ಸಂಕಷ್ಟ ಎದುರಾಗಿದೆ. ಶಾಸಕ ಎಂ.ವೈ.ಪಾಟೀಲ್ ಅವರ ಗನ್​ಮ್ಯಾನ್​ ಹಯ್ಯಾಳಿ ದೇಸಾಯಿ ಅವರನ್ನು ಪಿಎಸ್​ಐ ಮಾಡುವ ಉದ್ದೇಶದಿಂದ ಅಕ್ರಮ ನಡೆದಿರುವ ಶಂಕೆ ಉಂಟಾಗಿದೆ. ದೇಸಾಯಿ ಅವರನ್ನು ಅಕ್ರಮವಾಗಿ ಪಿಎಸ್​ಐ ಮಾಡಲು ಹೊರಟಿದ್ದರು ಎಂಬ ಆರೋಪ ಕೇಳಿಬಂದಿದೆ.

ಈ ಮಾಹಿತಿ ನೀಡಿರುವುದು ಪಿಎಸ್‌ಐ ಅಕ್ರಮ ನೇಮಕಾತಿಯ ಕಿಂಗ್​ಪಿನ್​ ಆರ್.ಡಿ.ಪಾಟೀಲ್! ಸಿಐಡಿ ಮುಂದೆ ಈ ಮಾಹಿತಿಯನ್ನು ಈತ ಹೇಳಿದ್ದಾನೆ ಎನ್ನಲಾಗಿದೆ.

ಗನ್​ಮ್ಯಾನ್​ಗೆ ಪಿಎಸ್​ಐ ಪಟ್ಟ!
ಹಯ್ಯಾಳಿ ದೇಸಾಯಿ ಅವರನ್ನು ಪಿಎಸ್‌ಐ ಮಾಡಬೇಕು ಎಂದು ಅರುಣ್​ ಅವರು, ಮಂಜುನಾಥ್‌ ಮೇಳಕುಂದಿಗೆ ಸೂಚನೆ ನೀಡಿದ್ದರು ಎನ್ನಲಾಗಿದೆ. ಈ ಸಂಬಂಧ ಮಾತನಾಡಲು ಮಂಜುನಾಥ್‌ ಮೇಳಕುಂದಿಗೆ ಕರೆಮಾಡಿದ್ದ ಆರ್​.ಡಿ.ಪಾಟೀಲ್​ ಅವರು, ಅರುಣ್ ಜತೆ ಮಾತನಾಡುವಂತೆ ಸೂಚಿಸಿರುವುದಾಗಿ ತಿಳಿದುಬಂದಿದೆ. ಈ ಸೂಚನೆ ಮೇರೆಗೆ ಮಂಜುನಾಥ್‌ ಮೇಳಕುಂದಿ ಶಾಸಕರ ಪುತ್ರ ಅರುಣ್ ಕುಮಾರ್​ಗೆ ಕರೆ ಮಾಡಿ30 ಲಕ್ಷಕ್ಕೆ ಡೀಲ್ ಕುದರಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.


Spread the love

About Laxminews 24x7

Check Also

ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

Spread the love ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ