Breaking News

ಯಮಕನಮರಡಿ ಮತಕ್ಷೇತ್ರದ ಕೇದನೂರ ಮತ್ತು ಮಣ್ಣಿಕೇರಿ ಗ್ರಾಮಗಳ ಸಂತ್ರಸ್ತರಿಗೆ ಸತೀಶ ಜಾರಕಿಹೊಳಿ ಫೌಂಡೇಶನ್ ನೆರವಿನ ಹಸ್ತ

Spread the love

ಮಹಾಮಳೆಯಿಂದ ಕುಸಿದು ಬಿದ್ದಿರುವ ಯಮಕನಮರಡಿ ಮತಕ್ಷೇತ್ರದ ಕೇದನೂರ ಮತ್ತು ಮಣ್ಣಿಕೇರಿ ಗ್ರಾಮಗಳ ಸಂತ್ರಸ್ತರಿಗೆ ಸತೀಶ ಜಾರಕಿಹೊಳಿ ಫೌಂಡೇಶನ್ ನೆರವಿನ ಹಸ್ತ ಚಾಚಿದೆ.

ಹೌದು ಬೆಳಗಾವಿ ನಗರ ಹಾಗೂ ತಾಲೂಕಿನಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ಸಾಕಷ್ಟು ಮನೆಗಳು ಧರೆಗೆ ಉರುಳಿದ್ರೆ, ಹೊಲದಲ್ಲಿ ಬೆಳೆದಿದ್ದ ಬೆಳೆಗಳು ಜಲಾವೃತವಾಗಿ ಹಾನಿಯಾಗಿವೆ.

ಹೀಗೆ ಬೆಳಗಾವಿ ತಾಲೂಕಿನ ಯಮಕನಮರಡಿ ಮತಕ್ಷೇತ್ರದ ಕೇದನೂರ ಮತ್ತು ಮಣ್ಣಿಕೇರಿ ಗ್ರಾಮದಲ್ಲಿ ಪ್ರಕಾಶ ರಾಮಚಂದ್ರ, ಶಾಂತಾ ಯಲ್ಲಪ್ಪ ವರ್ಗೆ, ರೇಖಾ ಬಾಳು ರಾಜಾಯಿ, ಮಲ್ಲವ್ವ ಮಲ್ಲಪ್ಪ ಪಾಟೀಲ್, ಪ್ರಭು ದೇವನು ರಾಜಾಯಿ ಹಾಗೂ ಕಲ್ಪನಾ ಶಟ್ಟು ಪಾಟೀಲ್ ಅವರ ಮನೆಗಳು ಮಳೆಯಿಂದ ಬಿದ್ದಿವೆ.

ಹೀಗಾಗಿ ಇವರ ಮನೆಗಳಿಗೆ ಶಾಸಕ ಸತೀಶ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಭೇಟಿ ನೀಡಿದ ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ್ ಅವರು ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಆಹಾರ ಸಾಮಗ್ರಿಗಳನ್ನು ವಿತರಿಸಿ, ಸಾಂತ್ವನ ಹೇಳಿದರು.


Spread the love

About Laxminews 24x7

Check Also

ಜನ್ಮದಿನ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ, ಮೃಣಾಲ್

Spread the loveಬೆಳಗಾವಿ : ಶನಿವಾರ ಬೆನಕನಹಳ್ಳಿಯ ಗಾರ್ಡನ್ ಕೋರ್ಟ್ ಮುಂಬಾಗದಲ್ಲಿ ಹಿರಿಯ ನಾಗರಿಕರೊಂದಿಗೆ ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ