Breaking News

ಯಮಕನಮರಡಿ ಮತಕ್ಷೇತ್ರದ ಕೇದನೂರ ಮತ್ತು ಮಣ್ಣಿಕೇರಿ ಗ್ರಾಮಗಳ ಸಂತ್ರಸ್ತರಿಗೆ ಸತೀಶ ಜಾರಕಿಹೊಳಿ ಫೌಂಡೇಶನ್ ನೆರವಿನ ಹಸ್ತ

Spread the love

ಮಹಾಮಳೆಯಿಂದ ಕುಸಿದು ಬಿದ್ದಿರುವ ಯಮಕನಮರಡಿ ಮತಕ್ಷೇತ್ರದ ಕೇದನೂರ ಮತ್ತು ಮಣ್ಣಿಕೇರಿ ಗ್ರಾಮಗಳ ಸಂತ್ರಸ್ತರಿಗೆ ಸತೀಶ ಜಾರಕಿಹೊಳಿ ಫೌಂಡೇಶನ್ ನೆರವಿನ ಹಸ್ತ ಚಾಚಿದೆ.

ಹೌದು ಬೆಳಗಾವಿ ನಗರ ಹಾಗೂ ತಾಲೂಕಿನಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ಸಾಕಷ್ಟು ಮನೆಗಳು ಧರೆಗೆ ಉರುಳಿದ್ರೆ, ಹೊಲದಲ್ಲಿ ಬೆಳೆದಿದ್ದ ಬೆಳೆಗಳು ಜಲಾವೃತವಾಗಿ ಹಾನಿಯಾಗಿವೆ.

ಹೀಗೆ ಬೆಳಗಾವಿ ತಾಲೂಕಿನ ಯಮಕನಮರಡಿ ಮತಕ್ಷೇತ್ರದ ಕೇದನೂರ ಮತ್ತು ಮಣ್ಣಿಕೇರಿ ಗ್ರಾಮದಲ್ಲಿ ಪ್ರಕಾಶ ರಾಮಚಂದ್ರ, ಶಾಂತಾ ಯಲ್ಲಪ್ಪ ವರ್ಗೆ, ರೇಖಾ ಬಾಳು ರಾಜಾಯಿ, ಮಲ್ಲವ್ವ ಮಲ್ಲಪ್ಪ ಪಾಟೀಲ್, ಪ್ರಭು ದೇವನು ರಾಜಾಯಿ ಹಾಗೂ ಕಲ್ಪನಾ ಶಟ್ಟು ಪಾಟೀಲ್ ಅವರ ಮನೆಗಳು ಮಳೆಯಿಂದ ಬಿದ್ದಿವೆ.

ಹೀಗಾಗಿ ಇವರ ಮನೆಗಳಿಗೆ ಶಾಸಕ ಸತೀಶ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಭೇಟಿ ನೀಡಿದ ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ್ ಅವರು ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಆಹಾರ ಸಾಮಗ್ರಿಗಳನ್ನು ವಿತರಿಸಿ, ಸಾಂತ್ವನ ಹೇಳಿದರು.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ