Breaking News

ರಾಜ್ಯದ ಕೈದಿಗಳ ದಿನಗೂಲಿ 200 ರೂ.ನಿಂದ 525 ರೂ.ಗೆ ಏರಿಕೆ : ಗೃಹ ಸಚಿವ ಅರಗ ಜ್ಞಾನೇಂದ್ರ

Spread the love

ಬೆಂಗಳೂರು : ರಾಜ್ಯದಲ್ಲಿನ ಎಲ್ಲಾ ಕಾರಾಗೃಹಗಳಲ್ಲಿ ದುಡಿಯುತ್ತಿರುವ ಕೈದಿಗಳಿಗೆ ರಾಜ್ಯ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ಕೂಲಿ ದರವನ್ನು ನೀಡಲಾಗುವುದು ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ.

 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಕೈದಿಗಳಿಗೆ ದಿನಗೂಲಿ 200 ರೂ. ನೀಡಲಾಗುತ್ತಿದ್ದು, ಕಾರ್ಮಿಕ ಇಲಾಖೆ ನಿಗದಿಪಡಿಸಿರುವ ಕನಿಷ್ಟ ಕೂಲಿ 525 ರೂ. ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ 7 ಕೋಟಿ ರೂ. ವಿಶೇಷ ಅನುದಾನ ಮೀಸಲಿಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

 

ಸ್ವಾತಂತ್ರ್ಯ ದಿನದ ಅಂಗವಾಗಿ ಸನ್ನಡತೆ ಆಧಾರದ ಮೇಲೆ 84 ಕೈದಿಗಳನ್ನು ಬಿಡುಗಡೆ ಮಾಡಲಾಗ್ತಿದೆ. ಆಜಾದಿ ಕಾ ಅಮೃತ ಮಹೋತ್ಸವ ದಿನದ ಅಂಗವಾಗಿ ನಮ್ಮ‌ 1 ಲಕ್ಷದ ಪೊಲೀಸ್ ಅಧಿಕಾರಿಗಳ ಮನೆ ಮೇಲೆ ತಿರಂಗ ಹಾರಿಸಲಾಗುತ್ತದೆ ಎಂದು ಹೇಳಿದ್ದಾರೆ.

 

ಚಂದ್ರು ಹತ್ಯೆ ಪ್ರಕರಣ ಚಾರ್ಜ್ ಶೀಟ್ ಸಲ್ಲಿಕೆ ವಿಚಾರ ಪ್ರತಿಕ್ರಿಯಿಸಿ, ಚಂದ್ರು ಹತ್ಯೆಗೆ ಭಾಷೆಯೂ ಒಂದು ಕಾರಣವಾಗಿದೆ. ಚಾರ್ಜ್ ಶೀಟ್ ಬಗ್ಗೆ ನಾನು ಓದಿದ್ದೇನೆ. ಆದ್ರೆ ಅಧಿಕಾರಿಗಳ ಜೊತೆ ಚರ್ಚೆ ಮಾಡಿಲ್ಲ. ಚಂದ್ರು ಹತ್ಯೆಗೆ ಭಾಷೆಯೂ ಒಂದು ಕಾರಣ ಅನ್ನೋದು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖ ಆಗಿದೆ ಎಂದರು.


Spread the love

About Laxminews 24x7

Check Also

ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಹಿರಿಯ ನಟ ಉಮೇಶ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Spread the loveಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್‌.ಉಮೇಶ್‌ ಅವರು ಮನೆಯ ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ