ಕಾಂಗ್ರೆಸ ಪಕ್ಷದವರು ಎಂದೂ ಸತ್ಯ ಹೇಳುವುದಿಲ್ಲ. ಅವರು ಸತ್ಯ ಮಾತನಾಡಿದ ದಿನ ಅವರಿಗೆ ಸಾವು ಬರುತ್ತದೆ ಎಂದು ಸಚಿವ ಗೋವಿಂದ ಕಾರಜೋಳ, ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.
ಚಿಕ್ಕೋಡಿಯಲ್ಲಿ ಪ್ರವಾಹ ಕುರಿತು ಅಧಿಕಾರಿಗಳೊಂದಿಗೆ ಮುಂಜಾಗೃತಾ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೋದಿ ಬಾಂಬ್ ಹಾರಿಸಿ ಪಾಕಿಸ್ತಾನ ಹೆಸರು ಹೇಳುತ್ತಾರೆ ಎಂಬ ಸತೀಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದರು.
ಕಾಂಗ್ರೆಸ್ಸಿಗರು ಸುಳ್ಳು ಹೇಳುವುದರಲ್ಲಿ ನಿಸ್ಸಿಮರು. ಸಿದ್ದರಾಮಯ್ಯ ಅವರು 7 ಕೆಜಿ ಅಕ್ಕಿ ನೀಡಿದ್ದಾರೆ. ಆದರೆ ನರೇಂದ್ರ ಮೋದಿ ಅವರು 10 ಕೆಜಿ ಅಕ್ಕಿ ನೀಡಿದರೂ ಪ್ರಚಾರ ಪಡೆದಿಲ್ಲ. ಕಾಂಗ್ರೆಸ್ ಸತ್ಯ ಹೇಳಿದ ದಿನ ಅವರಿಗೆ ಸಾವು ಬರುತ್ತೆ ಎಂದು ಆಕ್ರೋಶ ಹೊರಹಾಕಿದರು.