Breaking News

ಸ್ವಾತಂತ್ರ್ಯ ನಂತರ ಮೊದಲ ಬಾರಿಗೆ ಶಿರೋಳ ಗ್ರಾಮಕ್ಕೆ ಬಂತು ಸಾರಿಗೆ ಬಸ್ !

Spread the love

ಮುದ್ದೇಬಿಹಾಳ: ಕೊನೆಗೂ ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರ ಮೊದಲ ಬಾರಿಗೆ ಪಟ್ಟಣದಿಂದ 3-4 ಕಿಮಿ ಅಂತರದಲ್ಲಿರುವ ಶಿರೋಳ ಗ್ರಾಮಕ್ಕೆ ಸೋಮವಾರ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಬಂದಿದ್ದು ಗ್ರಾಮಸ್ಥರಲ್ಲಿ ಹರ್ಷದ ಹೊನಲು ಹರಿಯುವಂತೆ ಮಾಡಿದೆ.

 

ಶನಿವಾರ ನಡೆದಿದ್ದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಬಸ್ ಸೌಲಭ್ಯ ಇಲ್ಲದಿರುವ ಕುರಿತು ತಾಲೂಕಾಡಳಿತದ ಮುಖ್ಯಸ್ಥರಾದ ತಹಶೀಲ್ದಾರ್ ಬಿ.ಎಸ್.ಕಡಕಭಾವಿ ಅವರ ಗಮನ ಸೆಳೆದಿದ್ದರು. ಸಭೆಯಲ್ಲಿ ಭರವಸೆ ನೀಡಿದಂತೆ ತಹಶೀಲ್ದಾರ್ ಅವರು ಸಾರಿಗೆ ಸಂಸ್ಥೆಯ ಘಟಕ ವ್ಯವಸ್ಥಾಪಕರೊಂದಿಗೆ ಮಾತನಾಡಿ ಸೋಮವಾರ ಗ್ರಾಮಕ್ಕೆ ಬಸ್ ಓಡಿಸುವ ವ್ಯವಸ್ಥೆ ಮಾಡಿ ಬೇಡಿಕೆಗೆ ಸ್ಪಂಧಿಸಿರುವುದು ಅಧಿಕಾರಿಗಳ ಮೇಲಿನ ಭರವಸೆ ಇಮ್ಮಡಿಗೊಳಿಸಿದಂತಾಗಿದೆ.

ಮೊದಲ ಬಾರಿಗೆ ಗ್ರಾಮಕ್ಕೆ ಬಂದ ಬಸ್‍ಗೆ ಗ್ರಾಮಸ್ಥರು ಹರ್ಷದಿಂದಲೇ ವಿಶೇಷ ಪೂಜೆ ಸಲ್ಲಿಸಿ ಸ್ವಾಗತಿಸಿಕೊಂಡರು. ಈ ವೇಳೆ ಗ್ರಾಪಂ ಸದಸ್ಯ ದ್ಯಾವಪ್ಪ ಹುಣಶ್ಯಾಳ ಮಾತನಾಡಿ, ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಹೇಳಿದ ಸಮಸ್ಯೆಗೆ ತಕ್ಷಣ ಸ್ಪಂದಿಸಿರುವ ತಾಲೂಕಾಡಳಿತಕ್ಕೆ ಗ್ರಾಮಸ್ಥರ ಪರವಾಗಿ ಅಭಿನಂದಿಸುವುದಾಗಿ ತಿಳಿಸಿದರು.


Spread the love

About Laxminews 24x7

Check Also

ಲಿಂಗಾಯತ ಬಿಸಿನೆಸ್ ಫೋರಮ್‌ (ಎಲ್‌ಬಿಎಫ್‌) ಉದ್ಯಮಿಗಳು, ವೃತ್ತಿಪರರು ಮತ್ತು ವ್ಯಾಪಾರ ನಾಯಕರ ಸಕ್ರಿಯ ವೇದಿಕೆ ಇತ್ತೀಚೆಗೆ ತನ್ನ 50ನೇ ಮಾಸಿಕ ಸಭೆಯನ್ನು ಅದ್ಧೂರಿಯಾಗಿ ಆಚರಿಸಿತು..

Spread the love ಲಿಂಗಾಯತ ಬಿಸಿನೆಸ್ ಫೋರಮ್‌ (ಎಲ್‌ಬಿಎಫ್‌) ಉದ್ಯಮಿಗಳು, ವೃತ್ತಿಪರರು ಮತ್ತು ವ್ಯಾಪಾರ ನಾಯಕರ ಸಕ್ರಿಯ ವೇದಿಕೆ ಇತ್ತೀಚೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ