Breaking News

ಸಿದ್ದರಾಮಯ್ಯ ವಿರುದ್ಧವೇ ಸ್ಫರ್ಧೆ: ಶ್ರೀರಾಮಲು

Spread the love

ಬೀದರ್: ಬಿಜೆಪಿ ಪಕ್ಷ ಸೂಚಿಸಿದರೆ ಮತ್ತೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧವೇ ಸ್ಫರ್ಧೆ ಮಾಡುವುದಾಗಿ ಸಾರಿಗೆ ಸಚಿವ ಶ್ರೀರಾಮಲು ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾದಾಮಿಯಲ್ಲಿ ಸಿದ್ದರಾಮಯ್ಯ ಮತ್ತೆ ಸ್ಫರ್ಧಿಸಿದರೆ ಅವರು ಠೇವಣಿ ಕಳೆದುಕೊಳ್ಳಲಿದ್ದಾರೆ.

ಅಲ್ಲಿನ‌ ಜನ‌ ಶ್ರೀರಾಮುಲು ಅವರನ್ನು ಸೋಲಿಸಿ ಪಶ್ಚಾತ್ತಾಪ ಪಡುತ್ತಿದ್ದಾರೆ ಎಂದರು.

ಕ್ಷೇತ್ರ ಹುಡುಕಾಡುತ್ತಿರುವ ಸಿದ್ದರಾಮಯ್ಯ ಸಿಎಂ ಹೇಗಾಗುತ್ತಾರೆ? ಪಕ್ಷದ ಬೆಂಬಲದ ಮೇಲೆ ಸಿದ್ದರಾಮಯ್ಯ ಹಾರಾಡುತ್ತಿದ್ದಾರೆ, ಅವರಿಗೆ ವೈಯಕ್ತಿಕ ವರ್ಚಸ್ಸು ಇಲ್ಲ. ಸ್ವಂತ ಶಕ್ತಿ ಸಿದ್ದರಾಮಯ್ಯಗೆ ಇಲ್ಲ, ಅವರಿಗೆ ಸಿದ್ದಾಂತಗಳಿಲ್ಲ. ಹಿಂದುಳಿದ ಜಾತಿಯ ‌ಹೆಸರು ಹೇಳಿಕೊಂಡು ರಾಜಕೀಯ ‌ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.


Spread the love

About Laxminews 24x7

Check Also

ಸ್ವಾವಲಂಬಿ ಬದುಕಿಗೆ ಆಸರೆಯಾದ ಕೈ ಕಸೂತಿ ಕೆಲಸ: ಇತರರಿಗೂ ಕಲಿಸುವ ಮೂಲಕ ಮಾದರಿಯಾದ ಪಶ್ಚಿಮ ಬಂಗಾಳ ಮಹಿಳೆ

Spread the loveಬೀದರ್, ಜೂನ್​ 02: ಅಂದು ದೇಶದಲ್ಲಿ ಕೋವಿಡ್​ ಸೋಂಕಿನಿಂದ ಮನುಕುಲವೇ ನಲುಗಿ ಹೋಗಿತ್ತು. ಅದೆಷ್ಟೋ ಜನರು ಕೆಲಸವಿಲ್ಲದೆ ಮನೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ