Breaking News

ರಾಜಕುಮಾರ್ ಟಾಕಳೆ ಎಂಬುವವರು ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ನವ್ಯಾಶ್ರೀ ಆರ್‌.ರಾವ್ ಮತ್ತು ಆಕೆಯ ಸ್ನೇಹಿತನ ವಿರುದ್ಧ ಸುಲಿಗೆ, ಸುಳ್ಳು ಅತ್ಯಾಚಾರ ಆರೋಪ ಹಾಗೂ ಜೀವ ಬೆದರಿಕೆ

Spread the love

ಬೆಳಗಾವಿ: ತೋಟಗಾರಿಕೆ ಇಲಾಖೆಯ ಅಧಿಕಾರಿ ರಾಜಕುಮಾರ ಟಾಕಳೆ ಮತ್ತು ಸಾಮಾಜಿಕ ಕಾರ್ಯಕರ್ತೆ ನವ್ಯಾಶ್ರೀ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುತ್ತಿದ್ದಾರೆ. ನವ್ಯಾಶ್ರೀ ಬೆದರಿಕೆ ಹಾಕುತ್ತಿದ್ದಾರೆ ಎಂದು ಅಧಿಕಾರಿ ರಾಜಕುಮಾರ ಟಾಕಳೆ ದೂರು ನೀಡಿದ್ರೆ, ಇತ್ತ ರಾಜಕುಮಾರ ಅವರೇ ನನ್ನ ಗಂಡ ಎಂದು ನವ್ಯಾಶ್ರೀ ಹೇಳುತ್ತಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ನವ್ಯಾಶ್ರೀ, ರಾಜಕುಮಾರ ಟಾಕಳೆ ನನ್ನ ಗಂಡ, ಅವನಿಂದ ನನಗೆ ಏನು ಮೋಸ ಆಗಿದೆ ಅನ್ನೋದನ್ನ ಮುಂದಿನ ದಿನಗಳಲ್ಲಿ ಹೇಳುತ್ತೇನೆ ಎಂದು ಸಾಮಾಜಿಕ ಕಾರ್ಯಕರ್ತೆ ನವ್ಯಶ್ರೀ ಹೇಳಿದರು. ನಾನು 15 ದಿನಗಳಿಂದ ಭಾರತದಲ್ಲಿ ಇರಲಿಲ್ಲ. ಸಾಮಾಜಿಕ ಜಾಲತಾಣದಲ್ಲಿ ನನ್ನ ಫೋಟೋ, ವಿಡಿಯೋ ವೈರಲ್ ಆಗಿರುವುದು ಗೊತ್ತಾಗಿದೆ. ಈ ಬಗ್ಗೆ ನಾನು ಬೆಳಗಾವಿ ಪೊಲೀಸ್ ಕಮಿಷನರ್ ಭೇಟಿಯಾಗಿ ದೂರು ಕೊಡುತ್ತೇನೆ ಎಂದರು.

ನನ್ನ ಮೇಲೆ ಎಫ್​ಐಆರ್ ದಾಖಲಾಗಿರುವ ಬಗ್ಗೆ ಮಾಹಿತಿಯಿಲ್ಲ. ಈವರೆಗೂ ಯಾವುದೇ ಪೊಲೀಸರು ನನಗೆ ಫೋನ್ ಮಾಡಿಲ್ಲ. ಎಫ್​ಐಆರ್ ಕಾಪಿ‌ ಪಡೆದು ಮಾತಾಡುತ್ತೇನೆ. ರಾಜಕುಮಾರ ಟಾಕಳೆ ನನ್ನ ಗಂಡ. ಅವನಿಂದ ನನಗೆ ಏನು ಮೋಸ ಆಗಿದೆ. ಅನ್ನೋದನ್ನ ಮುಂದಿನ ದಿನಗಳಲ್ಲಿ ಹೇಳುತ್ತೇನೆ. ನಾನು ಯಾವ ರೀತಿ ಮದುವೆ ಆಗಿದ್ದೇನೆ ಅನ್ನೋದನ್ನು ದಾಖಲೆ ಸಮೇತ ಬರುತ್ತೇನೆ ಎಂದು ನವ್ಯಾಶ್ರೀ ತಿಳಿಸಿದರು.


Spread the love

About Laxminews 24x7

Check Also

ಜಿಲ್ಲಾಮಟ್ಟದ ಕ್ರೀಡಾ ಕೂಟದಲ್ಲಿ ಸಾಧನೆ ಮಾಡಿದ ಸಿಬ್ಬಂದಿಯನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

Spread the love ಜಿಲ್ಲಾಮಟ್ಟದ ಕ್ರೀಡಾ ಕೂಟದಲ್ಲಿ ಸಾಧನೆ ಮಾಡಿದ ಸಿಬ್ಬಂದಿಯನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌* *ಗ್ರಾಮೀಣ ಕ್ಷೇತ್ರಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ