Breaking News

ಮರಾಠ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ರೂ. ಅನುದಾನ ಏನೆಲ್ಲಾ ಯೋಜನೆಗಳು ಸಿಗಲಿದೆ?

Spread the love

ಬೆಂಗಳೂರು: ರಾಜ್ಯ ಸರ್ಕಾರದ ಎದುರು ಕರ್ನಾಟಕದ ಮರಾಠ ಸಮುದಾಯ (Maratha community) ಹಲವು ಬೇಡಿಕೆಗಳನ್ನು ಇಟ್ಟಿದೆ. ಮರಾಠ ಸಮುದಾಯದವರ ಮೀಸಲಾತಿ ಬೇಡಿಕೆಗೆ ರಾಜ್ಯ ಹಿಂದುಳಿದ ವರ್ಗದ ವರದಿ ಬಂದ ನಂತರ ಸಂವಿಧಾನದ ಚೌಕಟ್ಟಿನೊಳಗೆ ನ್ಯಾಯ ಒದಗಿಸಲು ಕ್ರಮ‌ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ತಿಳಿಸಿದರು. ಅವರು ಇಂದು ಕರ್ನಾಟಕ ಮರಾಠ ಅಭಿವೃದ್ಧಿ ನಿಗಮ ಹಾಗೂ ಫಲಾನುಭವಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರ ಮವನ್ನು ಉದ್ಘಾಟಿಸಿ ಮಾತನಾಡಿದದ್ದರು. ಮರಾಠ ಸಮುದಾಯದ 3 ಬಿ ಇಂದ 2 ಎ ಮೀಸಲಾತಿಯ ಬೇಡಿಕೆಗೆ ಸ್ಪಂದಿಸಿ, ಸಮುದಾಯಕ್ಕೆ ನ್ಯಾಯ ಒದಗಿಸುವ ಚಿಂತನೆ ಸರ್ಕಾರಕ್ಕಿದೆ. ಪ್ರಧಾನಿ ಮೋದಿಯವರು ರಾಜ್ಯದ ಹಿಂದುಳಿದ ವರ್ಗದವರಿಗೆ  ಸಂವಿಧಾನತ್ಮಕವಾದ ಸ್ಥಾನಮಾನವನ್ನು ದೊರಕಿಸಿಕೊಟ್ಟಿದ್ದಾರೆ. ಈ ಬಗ್ಗೆ ಹಿಂದುಳಿದ ವರ್ಗಗಳ ಆಯೋಗದಿಂದ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.

ಮೀಸಲಾತಿಯ ಬೇಡಿಕೆ ಇಟ್ಟಿರುವ ಎಲ್ಲ ಸಮುದಾಯಗಳಿಗೆ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ. ಮರಾಠ ಸಮುದಾಯದ ಮಹನೀಯರ ಸಮಾಧಿಗಳು, ಐತಿಹಾಸಿಕ ಕುರುಹುಗಳ ಅಭಿವೃದ್ಧಿಗಾಗಿ ಡಿಪಿಆರ್ ಸಿದ್ಧಪಡಿಸಲು 10 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ. ಸಂತ ರಾಮದಾಸ್, ತುಕಾರಂ, ಏಕನಾಥ್ ಅವರ ಆದರ್ಶಗಳು ಎಲ್ಲ ಕಾಲದಲ್ಲಿಯೂ ಪ್ರಭಾವವನ್ನು ಬೀರುತ್ತದೆ. ಮರಾಠ ಸಮುದಾಯದ ಗೌರವವನ್ನು, ಅಸ್ಮಿತೆಯನ್ನು ಉಳಿಸಲಾಗುವುದು ಎಂದು ತಿಳಿಸಿದರು.

ಮರಾಠ ಸಮುದಾಯಕ್ಕೆ ಸಿಎಂ ನೀಡಿದ ಭರವಸೆಗಳೇನು?

ಗಡಿಭಾಗದ ಗ್ರಾಮಪಂಚಾಯತಿಗಳ ಸಮಗ್ರ ಅಭಿವೃದ್ಧಿ

ಕಾರವಾರದಿಂದ ಬೀದರ್ ವರೆಗೂ ಬಹುತೇಕ ಗಡಿ ಭಾಗಗಳಲ್ಲಿ ಮರಾಠಾ ಸಮುದಾಯ ನೆಲೆಸಿದೆ. ಈ ಗಡಿ ಭಾಗಗಳ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಗಡಿಭಾಗದ ಪ್ರತಿಯೊಂದು ಗ್ರಾಮಪಂಚಾಯತಿಗಳ ಸಮಗ್ರ ಅಭಿವೃದ್ಧಿ ಮಾಡುವ ತೀರ್ಮಾನ ಆಯವ್ಯಯದಲ್ಲಿ ಮಾಡಲಾಗಿದೆ. ಗಡಿಭಾಗದ ಸಂಪರ್ಕ ರಸ್ತೆ ಕಾಮಗಾರಿಗಳನ್ನು, ಗಡಿ ಪ್ರಾಧಿಕಾರಕ್ಕೆ ಹೆಚ್ಚು ಅನುದಾನವನ್ನು ಕೆಲವೇ ದಿನಗಳಲ್ಲಿ ಒದಗಿಸಲಾಗುವುದು ಎಂದರು.

ಮರಾಠ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ರೂ. ಅನುದಾನ

ಕರ್ನಾಟದಲ್ಲಿ ಈ ಸಮುದಾಯ ಮುಖ್ಯವಾಹಿನಿಯಲ್ಲಿ ಬೆರೆತಿದೆ. ಕರ್ನಾಟಕದ ಮರಾಠಾ ಸಮುದಾಯ ಕನ್ನಡಿಗರಾಗಿ ಮುಂದುವರೆಯುತ್ತದೆ ಎನ್ನುವ ಬಗ್ಗೆ ಎರಡು ಮಾತಿಲ್ಲ. ಮರಾಠ ಅಭಿವೃದ್ಧಿ ನಿಗಮದಿಂದ  ಹತ್ತು ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ರೈತರಿಂದ ಹಿಡಿದು, ಯುವಕರಿಗೆ ಸ್ವಯಂ ಉದ್ಯೋಗ, ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ ಸಮಗ್ರ ಅಭಿವೃದ್ಧಿಗೆ ಕಾರ್ಯಕ್ರಮಗಳನ್ನು ರೂಪಿಸಿ 100 ಕೋಟಿ ರೂ.ಅನುದಾನವನ್ನು ಒದಗಿಸಲಾಗಿದೆ. ಈ ಮೊತ್ತವನ್ನು ಸಮರ್ಪಕವಾಗಿ, ನ್ಯಾಯಸಮ್ಮತವಾಗಿ ಸಮುದಾಯದ ಬಡ ವಿದ್ಯಾರ್ಥಿಗಳು, ರೈತರು ಹಾಗೂ ಮಕ್ಕಳಿಗೆ ವಿನಿಯೋಗಿಸಬೇಕು. ಇದನ್ನು  ಪೂರ್ಣಪ್ರಮಾಣದಲ್ಲಿ ಬಳಸಿ ಪುನ: ಹೆಚ್ಚಿನ ಅನುದಾನವನ್ನು ನೀಡಲು ಸರ್ಕಾರ ಸಿದ್ಧವಿದೆ ಎಂದರು.


Spread the love

About Laxminews 24x7

Check Also

ಬೆಳಗಾವಿ ಜಿಲ್ಲೆಯ ಜನಪ್ರಿಯ ಜಿಲ್ಲಾಧಿಕಾರಿ ಸುಧೀರ್ಘ ಅವಧಿ ಸೇವೆ ಸಲ್ಲಿಸಿದ ಎನ್. ಜಯರಾಮ್ ಸರ್ ಇಂದು ಸೇವಾ ನಿವೃತ್ತಿ

Spread the loveಬಹು ಸಂಸ್ಕೃತಿ ಹಾಗೂ ಗಡಿನಾಡು ಬೆಳಗಾವಿ ಜಿಲ್ಲೆಯ ಜನಪ್ರಿಯ ಜಿಲ್ಲಾಧಿಕಾರಿ ಸುಧೀರ್ಘ ಅವಧಿ ಸೇವೆ ಸಲ್ಲಿಸಿದ ಎನ್. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ