ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾದವರೇ ಸಿಎಂ ಆಗುವುದು ಸಂಪ್ರದಾಯ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ವಾದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಖಾಸಗಿ ಟಿವಿ ಚಾನಲ್ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದವರೇ ಸಿಎಂ ಆಗಲೇಬೇಕು ಎಂದೇನಿಲ್ಲ. ಆಗದೇ ಇದ್ದವರನ್ನೂ ಮುಖ್ಯಮಂತ್ರಿಯಾಗಿ ಮಾಡಿದ ಸಂಪ್ರದಾಯ ಇದೆ. ಪಂಜಾಬಿನಲ್ಲಿ ಈ ರೀತಿ ಮಾಡಿಲ್ಲವೇ ? ಎಂದು ಪ್ರಶ್ನಿಸಿದ್ದಾರೆ.
ಯಾರು ಬೇಕಾದರೂ ಮುಖ್ಯಮಂತ್ರಿಯಾಗುತ್ತಾನೆ ಎಂದು ಆಕಾಂಕ್ಷೆ ವ್ಯಕ್ತಪಡಿಸಬಹುದು. ತಮ್ಮ ಸಮುದಾಯದ ಸಭೆಯಲ್ಲಿ ನಾನು ಸಿಎಂ ಆಗುವುದಕ್ಕೆ ಅವಕಾಶವಿದೆ. ಬೆಂಬಲ ನೀಡಿ ಎಂದು ಡಿ.ಕೆ.ಶಿವಕುಮಾರ್ ಹೇಳುದರಲ್ಲಿ ಯಾವುದೇ ತಪ್ಪಿಲ್ಲ. ಆದರೆ ಅಂತಿಮವಾಗಿ ಅದನ್ನು ನಿರ್ಧರಿಸುವವರು ಶಾಸಕರು ಹಾಗೂ ಹೈಕಮಾಂಡ್