Breaking News

ಧಾರವಾಡ : ಟಂಟಂ ವಾಹನ ತೊಳೆಯಲು ಹೋದ ತಂದೆ-ಮಗ ನೀರುಪಾಲು

Spread the love

ಧಾರವಾಡ: ಟಂಟಂ ವಾಹನವನ್ನು ತೊಳೆಯಲೆಂದು ಕೆರೆಗೆ ಇಳಿದಿದ್ದ ತಂದೆ-ಮಗ ಇಬ್ಬರು ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ಧಾರವಾಡ ತಾಲೂಕಿನ ಕ್ಯಾರಕೊಪ್ಪ ಗ್ರಾಮದಲ್ಲಿ ನಡೆದಿದೆ.

ಕ್ಯಾರಕೊಪ್ಪ ಗ್ರಾಮದ ಗದಿಗೆಪ್ಪ ಅಂಗಡಿ (ತಂದೆ) ಹಾಗೂ ರವಿ ಅಂಗಡಿ (ಮಗ) ಸಾವಿಗೀಡಾದ ದುರ್ದೈವಿಗಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

 

ಇವರಿಬ್ಬರೂ ಇಂದು ಬೆಳಿಗ್ಗೆ ಟಂಟಂ ವಾಹನ ತೊಳೆಯಲೆಂದು ಗ್ರಾಮದ ಹೊರವಲಯ ನವೋದಯ ಶಾಲೆಯ ಪಕ್ಕದ ಕರೆಗೆ ಇಳಿದಾಗ ಕಾಲು ಜಾರಿ ಕರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ತಂದೆ ಗದಿಗೆಪ್ಪನ ಶವ ದೊರೆತಿದ್ದು, ರವಿಯ ಶವಕ್ಕಾಗಿ ಶೋಧ ಕಾರ್ಯ ಮುಂದುವರೆದಿದೆ.


Spread the love

About Laxminews 24x7

Check Also

ಧಾರವಾಡ ಸಂಚಾರಿ ನಿಯಮ ಉಲ್ಲಂಘನೆ ಫೈನ್ 50% ಡಿಸ್ಕೌಂಟ್… 35 ಕೇಸ್ 9000 ಸಾವಿರ ದಂಡ ತುಂಬಿದ ನರೇಂದ್ರ ಗ್ರಾಮ ವ್ಯಕ್ತಿ.

Spread the love ಧಾರವಾಡ ಸಂಚಾರಿ ನಿಯಮ ಉಲ್ಲಂಘನೆ ಫೈನ್ 50% ಡಿಸ್ಕೌಂಟ್… 35 ಕೇಸ್ 9000 ಸಾವಿರ ದಂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ