Breaking News

ಸದ್ಯಕ್ಕೆ ರಾಜ್ಯದಲ್ಲಿ ಶಾಲೆಗಳನ್ನ ಆರಂಭ ಮಾಡ್ತಿಲ್ಲ:ಸುರೇಶ್ ಕುಮಾರ್

Spread the love

ಮೈಸೂರು: ರಾಜ್ಯದಲ್ಲಿ ಶಾಲೆಗಳನ್ನು ಆರಂಭ ಮಾಡುತ್ತಿಲ್ಲ. ಈಗ ಪಠ್ಯದ ಅನುಮಾನಗಳನ್ನು ಬಗೆಹರಿಸಿಕೊಳ್ಳಲು ಅನುಮತಿ ಸಿಕ್ಕಿದೆ. ಅದು ಕಡ್ಡಾಯ ಅಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ನಗರದಲ್ಲಿ ಮಾತನಾಡಿದ ಸುರೇಶ್ ಕುಮಾರ್, ರಾಜ್ಯದಲ್ಲಿ ಶಾಲೆಗಳನ್ನು ಆರಂಭ ಮಾಡುತ್ತಿಲ್ಲ. ಈಗ ಅನುಮತಿ ಸಿಕ್ಕಿರುವುದು ಪಠ್ಯದ ಅನುಮಾನಗಳನ್ನು ಬಗೆಹರಿಸಿಕೊಳ್ಳಲು. ಅದು ಕಡ್ಡಾಯ ಅಲ್ಲ. ಇದಕ್ಕೂ ಪೋಷಕರ ಅನುಮತಿ ಕಡ್ಡಾಯ. ಸೆಪ್ಟೆಂಬರ್ 21 ರಿಂದ ಎಲ್ಲಾ ಶಿಕ್ಷಕರು ಶಾಲೆಗೆ ಬರಬೇಕು. ಸೆಪ್ಟೆಂಬರ್ 21 ರಿಂದ 9, 10, 11, 12ನೇ ತರಗತಿ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಬಗ್ಗೆ ಏನಾದರೂ ಅನುಮಾನ ಇದ್ದರೆ ಸ್ಪಷ್ಟೀಕರಣ ತೆಗೆದುಕೊಳ್ಳಬಹುದು. ಅದು ದೈನಂದಿನ ತಗರತಿ ರೀತಿ ಅಲ್ಲ. ಓದಿದ್ದು ಅರ್ಥವಾಗಿಲ್ಲ ಅಂದರೆ ಶಿಕ್ಷಕರ ಜೊತೆ ಮಾಹಿತಿ ಪಡೆದುಕೊಳ್ಳಬಹುದು ಎಂದರು.

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ