ಬೆಂಗಳೂರು : ದಕ್ಷಿಣ ಭಾರತದಲ್ಲಿ ಕಮಲ ಅರಳಿದ ಮೊದಲ ರಾಜ್ಯವಾದ ಕರ್ನಾಟಕದಲ್ಲಿ ಯಡಿಯೂರಪ್ಪ ನಂತರ ಒಂದು ವರ್ಷದ ಆಡಳಿತವನ್ನು ಯಶಸ್ವಿಯಾಗಿ ಪೂರ್ಣಗೊಳಿಸುತ್ತಿರುವ ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆ ಬಸವರಾಜ ಬೊಮ್ಮಾಯಿ ಅವರದ್ದಾಗಿದೆ.
ರಾಜ್ಯದಲ್ಲಿ ಈವರೆಗೆ ನಾಲ್ವರು ಬಿಜೆಪಿಯಿಂದ ಮುಖ್ಯಮಂತ್ರಿಗಳಾಗಿದ್ದಾರೆ. ಯಡಿಯೂರಪ್ಪ ಮೊದಲ ಬಿಜೆಪಿ ಮುಖ್ಯಮಂತ್ರಿಯಾದರೆ ಡಿ.ವಿ. ಸದಾನಂದಗೌಡ ಎರಡನೇ ಸಿಎಂ, ಜಗದೀಶ್ ಶೆಟ್ಟರ್ ಮೂರನೇ ಮುಖ್ಯಮಂತ್ರಿಯಾಗಿದ್ದು, ಪ್ರಸ್ತುತ ಇರುವ ಬಸವರಾಜ ಬೊಮ್ಮಾಯಿ ನಾಲ್ಕನೇ ಮುಖ್ಯಮಂತ್ರಿಯಾಗಿದ್ದಾರೆ. ಈ ನಾಲ್ವರು ಮುಖ್ಯಮಂತ್ರಿಗಳಲ್ಲಿ ಯಡಿಯೂರಪ್ಪ ಹೊರತುಪಡಿಸಿದರೆ ಒಂದು ವರ್ಷ ಪೂರ್ಣಗೊಳಿಸಿದ ಮೊದಲ ಬಿಜೆಪಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಿದ್ದಾರೆ.
ಯಡಿಯೂರಪ್ಪ ಬಳಿಕ ವರ್ಷ ಪೂರೈಸಿದ ಮೊದಲ ಸಿಎಂ ಬೊಮ್ಮಾಯಿ : ರಾಜ್ಯದಲ್ಲಿ ಯಡಿಯೂರಪ್ಪ ನಂತರ ಬಸವರಾಜ ಬೊಮ್ಮಾಯಿ ವರ್ಷ ಪೂರ್ಣಗೊಳಿಸಿದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗುತ್ತಿದ್ದಾರೆ. ವರ್ಷದ ಸಾಧನಾ ಸಮಾವೇಶ ಮಾಡುತ್ತಿರುವ ಮೊದಲ ಮುಖ್ಯಮಂತ್ರಿಯೂ ಆಗುತ್ತಿದ್ದಾರೆ. ನಾಲ್ಕು ಬಾರಿ ಮುಖ್ಯಮಂತ್ರಿ ಆಗಿದ್ದ ಯಡಿಯೂರಪ್ಪ ಮೊದಲ ಬಾರಿ ವಾರದ ಸಿಎಂ, ಎರಡನೇ ಬಾರಿ ಮೂರೂವರೆ ವರ್ಷದ ಸಿಎಂ, ಮೂರನೇ ಬಾರಿ ಆರು ದಿನದ ಸಿಎಂ, ನಾಲ್ಕನೇ ಬಾರಿ ಎರಡು ವರ್ಷದ ಸಿಎಂ ಆಗಿದ್ದು, ಬಿಎಸ್ವೈ ನಂತರ ಬೊಮ್ಮಾಯಿ ವರ್ಷ ಮುಗಿಸುತ್ತಿರುವ ಮೊದಲ ಬಿಜೆಪಿ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆ ಪಡೆದುಕೊಳ್ಳುತ್ತಿದ್ದಾರೆ.