Breaking News

ಮಾನಮರ್ಯಾದೆ ಇದ್ದರೆ ತೇಜಸ್ವಿ ಸೂರ್ಯ ರಿಂದ ರಾಜೀನಾಮೆ ಪಡೆಯಲಿ: A.A.P.ಜಗದೀಶ್‌

Spread the love

ಬೆಂಗಳೂರು : ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ನಿವಾಸದ ಮುಂದೆ ದಾಂಧಲೆ ನಡೆಸಿದ ಪ್ರಕರಣದ ಆರೋಪಪಟ್ಟಿಯಲ್ಲಿ ಸಂಸದ ತೇಜಸ್ವಿ ಸೂರ್ಯ ಹೆಸರಿದ್ದು, ತಕ್ಷಣವೇ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಎಎಪಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ ಆಗ್ರಹಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಕ್ಷೇತ್ರದ ಸಮಸ್ಯೆಗಳನ್ನು ಪರಿಹರಿಸುತ್ತಾರೆ ಎಂಬ ನಂಬಿಕೆಯಿಂದ ಬೆಂಗಳೂರು ದಕ್ಷಿಣ ಕ್ಷೇತ್ರದ ಜನರು ತೇಜಸ್ವಿ ಸೂರ್ಯರನ್ನು ಸಂಸದರನ್ನಾಗಿ ಮಾಡಿದ್ದಾರೆ. ಆದರೆ ಸೂರ್ಯ ದೇಶದ ಯುವಜನತೆಯನ್ನು ಗೂಂಡಾಗಿರಿಗೆ ಬಳಸಿಕೊಳ್ಳುವುದರಲ್ಲಿ ನಿರತರಾಗಿದ್ದಾರೆ. ಮಾರ್ಚ್‌ 30ರಂದು ಸಿಎಂ ಅರವಿಂದ್‌ ಕೇಜ್ರಿವಾಲ್‌ ನಿವಾಸದ ಮೇಲೆ ನಡೆದ ದಾಳಿಯ ಚಾರ್ಜ್‌ಶೀಟ್‌ನಲ್ಲಿ ತೇಜಸ್ವಿ ಸೂರ್ಯ ಆರೋಪಿಯಾಗಿದ್ದಾರೆ. ಹೀಗಾಗಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಹುದ್ದೆಯ ಗೌರವ ಉಳಿಸಲಿ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಮದುವೆ ಪತ್ರಿಕೆ ಕೊಡುವ ನೆಪದಲ್ಲಿ ಬಂದ ದುಷ್ಕರ್ಮಿಗಳು: ಮಾಲೀಕರ ಕೈಕಾಲು ಕಟ್ಟಿ 200 ಗ್ರಾಂ ಚಿನ್ನ ಕದ್ದು ಎಸ್ಕೇಪ್

Spread the loveಮಂಗಳೂರು/ಬೆಂಗಳೂರು: ಪರಿಚಯವೇ ಇಲ್ಲದವರು ಮನೆಗೆ ಆಹ್ವಾನ ಪತ್ರಿಕೆ ನೀಡುವ ಸೋಗಿನಲ್ಲಿ ಮನೆಗೆ ಬಂದು, ಹಾಡಹಗಲೇ ಮನೆ ಮಾಲೀಕರ ಕೈಕಾಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ