Breaking News

ಉ.ಕನ್ನಡ ಜಿಲ್ಲೆಯಲ್ಲಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಬಗ್ಗೆ ಶೀಘ್ರ ನಿರ್ಧಾರ: ಕೆ.ಸುಧಾಕರ್

Spread the love

ಬೆಂಗಳೂರು: ಶಿರೂರು ಟೋಲ್ ಗೇಟ್ ನಲ್ಲಿ ಇತ್ತೀಚೆಗೆ ನಡೆದ ಆಯಂಬುಲೆನ್ಸ್ ಅಪಘಾತದ ಬಳಿಕ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಿಸಬೇಕು ಎಂಬ ಆಗ್ರಹ ಮತ್ತೆ ಮುನ್ನೆಲೆಗೆ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಅಭಿಯಾನಗಳು ನಡೆಯುತ್ತಿದೆ.

ಇದೇ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರೂ ಸರ್ಕರದ ಗಮನ ಸೆಳೆಯುವ ಕೆಲಸ ಮಾಡಿದ್ದರು.

ಈ ಬಗ್ಗೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಕೆ.ಸುಧಾಕರ್, ”ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ಸೆಂಟರ್ ಅವಶ್ಯಕತೆ ಇದೆ ಎಂಬ ಸಾರ್ವಜನಿಕರ ಬೇಡಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಗಮನಿಸಿದ್ದೇನೆ. ಕಾರವಾರದ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ ಸ್ಥಾಪನೆ ಹಾಗೂ ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಶೀಘ್ರವೇ ಸೂಕ್ತ ತೀರ್ಮಾನ ಕೈಗೊಳ್ಳುವ ಭರವಸೆ ನೀಡುತ್ತಿದ್ದೇನೆ ಎಂದಿದ್ದಾರೆ.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ