Breaking News
Home / ರಾಜಕೀಯ / ಕೂಡ್ಲಿಗಿಯಲ್ಲಿ ಯುವತಿಯ ರುಂಡ ಕಡಿದು ಠಾಣೆಗೆ ತಂದಿದ್ದ ಆರೋಪಿ ವಿರುದ್ಧ ದಾಖಲಾಯ್ತು ಮತ್ತೊಂದು ಕೇಸ್​!

ಕೂಡ್ಲಿಗಿಯಲ್ಲಿ ಯುವತಿಯ ರುಂಡ ಕಡಿದು ಠಾಣೆಗೆ ತಂದಿದ್ದ ಆರೋಪಿ ವಿರುದ್ಧ ದಾಖಲಾಯ್ತು ಮತ್ತೊಂದು ಕೇಸ್​!

Spread the love

ವಿಜಯನಗರ: ಕೂಡ್ಲಿಗಿ ತಾಲೂಕಿನ ಕನ್ನಬೋರಯ್ಯಹಟ್ಟಿಯಲ್ಲಿ ನಡೆದ ಯುವತಿಯ ಭೀಕರ ಕೊಲೆ ಪ್ರಕರಣದ ಆರೋಪಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.

ಆರೋಪಿ ಭೋಜರಾಜ್​ 15 ವರ್ಷದ ಅಪ್ರಾಪ್ತೆಯನ್ನು ಮದುವೆ ಆಗಿರುವ ಆರೋಪ ಕೇಳಿಬಂದಿದೆ.

ಹೀಗಾಗಿ ಆರೋಪಿ ವಿರುದ್ಧ ಬಾಲ್ಯ ವಿವಾಹ ಕಾಯ್ದೆ ಹಾಗೂ ಪೊಕ್ಸೊ ಅಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ತಂದೆ-ತಾಯಿ ಹಾಗೂ ಹುಡುಗಿಯ ತಂದೆ-ತಾಯಿ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.

ಖಾನಾಹೊಸಹಳ್ಳಿ ಠಾಣೆಯಲ್ಲಿ ಕೇಸು ದಾಖಳಾಗಿದೆ. ಅಪ್ರಾಪ್ತೆಯ ಹೇಳಿಕೆ ಆಧಾರದ ಮೇಲೆ ತನಿಖೆ ಮುಂದುವರೆಸುತ್ತೇವೆ ಎಂದು ವಿಜಯನಗರ ಪೊಲೀಸ್​ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಹೇಳಿಕೆ ನೀಡಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಆರೋಪಿ ಭೋಜರಾಜ, ನಿರ್ಮಾಲಾ ಎಂಬ ಯುವತಿಯ ರುಂಡ ಕತ್ತರಿಸಿ ಪೊಲೀಸ್ ಠಾಣೆಗೆ ರುಂಡ ಸಮೇತ ಬಂದಿದ್ದ. ಭೋಜರಾಜ ನಿರ್ಮಲಾಳನ್ನು ಪ್ರೀತಿಸುತ್ತಿದ್ದ. ನಿರ್ಮಲಾ ಬಿಎಸ್ಸಿ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದಳು. ನಿರ್ಮಲಾಳನ್ನು ಮದುವೆ ಮಾಡಿಕೊಡುವಂತೆ ಈ ಮೊದಲು ಆಕೆಯ ಪಾಲಕರಲ್ಲಿ ಈತ ಕೇಳಿದ್ದ. ಆದರೆ ಆಕೆಯ ಮನೆಯವರು ಒಪ್ಪಿರಲಿಲ್ಲ.

ಈ ಹಿನ್ನೆಲೆಯಲ್ಲಿ ಬೇರೊಬ್ಬಳನ್ನು ಎರಡು ತಿಂಗಳ ಹಿಂದೆ ಮದುವೆಯಾಗಿದ್ದ. ಆದರೆ ನಿರ್ಮಲಾಳ ಮೇಲೆ ಸೇಡು ತೀರಿಸಿಕೊಳ್ಳಲು ಕಾಯುತ್ತಿದ್ದ. ಬೇರೊಂದು ಊರಿನಲ್ಲಿ ಬಿಎಸ್ಸಿ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ನಿರ್ಮಲಾ, ಪರೀಕ್ಷೆಗಾಗಿ ಓದಲು ಊರಿಗೆ ಬಂದಿದ್ದಳು. ಇದೇ ಸಮಯಕ್ಕೆ ಕಾಯುತ್ತಿದ್ದ ಈ ಪಾಗಲ್​ ಪ್ರೇಮಿ, ಮಚ್ಚಿನಿಂದ ಆಕೆಯ ತಲೆ ಕಡಿದು ರುಂಡದೊಂದಿಗೆ ಠಾಣೆಗೆ ಶರಣಾಗಿದ್ದಾನೆ. 


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ