Breaking News

ಬಿಜೆಪಿಯಲ್ಲಿ ಗೆಲ್ಲುವಂತವರಿದ್ದರೆ 80 ವರ್ಷದ ಮುದುಕನಿಗೂ, ಸೋನಿಯಾ ಗಾಂಧಿಗೂ ಟಿಕೆಟ್ ಕೊಡ್ತಾರೆ

Spread the love

ಬಾಗಲಕೋಟೆ: ಶ್ರೀರಾಮ ಸೇನೆ ಮತ್ತು ಬಿಜೆಪಿಗೆ ಏನು ಸಂಬಂಧ ಇಲ್ಲ ಎಂದು ಕಟೀಲ್​​ ಹೇಳಿದ್ದಾರೆ. ನಾನೂ ಕೂಡ ಹೇಳಿದ್ದೇನೆ. ನಾನೇನು ಬಿಜೆಪಿ ಸದಸ್ಯನಲ್ಲ. ಯಾವ ಪಕ್ಷದ ಸಂಬಂಧವೂ ನಮ್ಮ ಸಂಘಟನೆಗೆ ಇಲ್ಲ. ಅವರೇನು ನಿರ್ಧಾರ ತೆಗೆದುಕೊಳ್ಳುತ್ತಾರೋ ತೆಗೆದುಕೊಳ್ಳಲಿ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂಪ್ಪ ಅವರು ತಮ್ಮ ಪುತ್ರನಿಗೆ ಕ್ಷೇತ್ರ ತ್ಯಾಗ ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್​​ ಮುತಾಲಿಕ್ ಪ್ರತಿಕ್ರಿಯಿಸಿದರು. ​​

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನೇನು ಬಿಜೆಪಿ ಸದಸ್ಯನಲ್ಲ ಎಂದರು. ಬಿಎಸ್​​ವೈ ಅವರನ್ನ ರಾಜಕೀಯವಾಗಿ ಮುಗಿಸುವ ತಂತ್ರ ನಡೆಯಿತಾ? ಎಂಬ ಪ್ರಶ್ನೆಗೆ ಉತ್ತರಿಸುತ್ತ, ಬಿಜೆಪಿಯನ್ನು ದೊಡ್ಡ ಮಟ್ಟದಲ್ಲಿ ಬೆಳೆಸಿದ ಶ್ರೇಷ್ಠ ವ್ಯಕ್ತಿ ಯಡಿಯೂರಪ್ಪ. ಬಿಜೆಪಿ ಕೇವಲ ಬ್ರಾಹ್ಮಣರಿಗೆ ಅನ್ನೋದಿತ್ತು. ಆದರೆ ಅದನ್ನ ಸರ್ವವ್ಯಾಪಿ ಬೆಳೆಸಿದ್ದೇ ಬಿ.ಎಸ್ ಯಡಿಯೂರಪ್ಪ. ನಾನು ದುಃಖ ಮತ್ತು ನೋವಿನಿಂದ ಹೇಳುತ್ತೇನೆ. ಅವರು ತಮ್ಮ ಮಗನಿಗಾಗಿ ಕ್ಷೇತ್ರ ಬಿಟ್ಟುಕೊಡುವುದರಿಂದ ಎಲ್ಲೋ ಒಂದು ಕಡೆ ಎಡುವುತ್ತಿದ್ದಾರೆ ಎಂದರು.

ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದು, ಪಕ್ಷದ ನಿರ್ಣಯ. ಬಿಜೆಪಿಯಲ್ಲಿ ಏನೇನೋ ಬದಲಾವಣೆ ನಡೆಯುತ್ತಿದೆ. ಸಂಬಂಧಿಗಳಿಗೆ ಟಿಕೆಟ್ ಇಲ್ಲ ಅಂದ್ರು. ಆದರೆ ಸುರೇಶ್​ ಅಂಗಡಿಯವರ ಪತ್ನಿಗೆ ಲೋಕಸಭಾ ಕ್ಷೇತ್ರದ ಟಿಕೆಟ್​ ಕೊಟ್ಟರು. ಬಳಿಕ ವಯಸ್ಸಿನ ಆಧಾರದ ಮೇಲೆ ಕೊಡೋಲ್ಲ ಎಂದರು. ಆದ್ರೆ ಹೊರಟ್ಟಿಗೆ ಕೊಟ್ಟರು. ಬಿಜೆಪಿಯಲ್ಲಿ ಸಿದ್ಧಾಂತ, ನಿಯಮ ಇಲ್ಲ, ಗೆಲ್ಲಬೇಕು ಅಷ್ಟೇ. ಗೆಲ್ಲುವಂತವರಿದ್ದರೆ 80 ವರ್ಷದ ಮುದುಕನಿಗೂ, ಸೋನಿಯಾ ಗಾಂಧಿಗೂ ಟಿಕೆಟ್ ಕೊಡ್ತಾರೆ ಎಂದು ವ್ಯಂಗ್ಯವಾಡಿದರು.


Spread the love

About Laxminews 24x7

Check Also

ಬೆಳಗಾವಿ ಜಿಲ್ಲೆಯ ಜನಪ್ರಿಯ ಜಿಲ್ಲಾಧಿಕಾರಿ ಸುಧೀರ್ಘ ಅವಧಿ ಸೇವೆ ಸಲ್ಲಿಸಿದ ಎನ್. ಜಯರಾಮ್ ಸರ್ ಇಂದು ಸೇವಾ ನಿವೃತ್ತಿ

Spread the loveಬಹು ಸಂಸ್ಕೃತಿ ಹಾಗೂ ಗಡಿನಾಡು ಬೆಳಗಾವಿ ಜಿಲ್ಲೆಯ ಜನಪ್ರಿಯ ಜಿಲ್ಲಾಧಿಕಾರಿ ಸುಧೀರ್ಘ ಅವಧಿ ಸೇವೆ ಸಲ್ಲಿಸಿದ ಎನ್. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ