Breaking News

ಜನನ, ಮರಣ ನೋಂದಣಿ ಕಾಯ್ದೆತಿದ್ದುಪಡಿ ರದ್ದುಗೊಳಿಸಲು ಆಗ್ರಹ

Spread the love

ಬೈಲಹೊಂಗಲ: ಜನನ ಮತ್ತು ಮರಣ ನೋಂದಣಿ ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದ ನ್ಯಾಯಾಂಗದ ವ್ಯಾಪ್ತಿಯನ್ನು ಬದಲಾವಣೆ ಮಾಡಿರುವುದನ್ನು ರದ್ದುಗೊಳಿಸಿ ಮೊದಲಿನಂತೆ ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ಮುಂದುವರಿಸಬೇಕು ಎಂದು ಒತ್ತಾಯಿಸಿ ತಾಲ್ಲೂಕು ವಕೀಲರ ಸಂಘದಿಂದ ಪ್ರತಿಭಟನೆ ನಡೆಯಿತು.

ತಹಶೀಲ್ದಾರ್ ಬಸವರಾಜ ನಾಗರಾಳ ಅವರಿಗೆ ವಕೀಲರು ಸೋಮವಾರ ಮನವಿ ಸಲ್ಲಿಸಿದರು.

ವಕೀಲರ ಸಂಘದ ಉಪಾಧ್ಯಕ್ಷ ಎಂ.ಆರ್. ಸೋಮಣ್ಣವರ, ವಕೀಲರ ಸಂಘದ ಕಾರ್ಯದರ್ಶಿ ಸಂತೋಷ ಭಾವಿ ಮಾತನಾಡಿ, ‘ಜನನ ಮತ್ತು ಮರಣ ನೋಂದಣಿ ಕಾಯ್ದೆಗೆ ಸಂಬಂಧಿಸಿದ ವಿಷಯಗಳು ಈ ಹಿಂದೆ ಜೆ.ಎಂ.ಎಫ್.ಸಿ. ನ್ಯಾಯಾಲಯದ ವ್ಯಾಪ್ತಿಗೆ ಇತ್ತು. ಈಗ ಅದಕ್ಕೆ ಬದಲಾಗಿ ಉಪವಿಭಾಗಾಧಿಕಾರಿಗಳ ನ್ಯಾಯಾಲಯಕ್ಕೆ ಪ್ರಕರಣಗಳ ಇತ್ಯರ್ಥಕ್ಕೆ ಅಧಿಕಾರ ನೀಡಿ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಇದರಿಂದ ಪಕ್ಷಗಾರರಿಗೆ ಅನ್ಯಾಯವಾಗುತ್ತದೆ. ಕೂಡಲೇ ಕರ್ನಾಟಕ ಜನನ, ಮರಣ ನೋಂದಣಿ ತಿದ್ದುಪಡಿ‌ ನಿಯಮವನ್ನು ರದ್ದುಗೊಳಿಸ ಈ ಮೊದಲಿನಂತೆ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ಮುಂದುವರಿಸಬೇಕು ಎಂದು ಮನವಿ ಮಾಡಿದರು.


Spread the love

About Laxminews 24x7

Check Also

ಮೂಡಲಗಿ ತಾಲೂಕಿನ ಅರಭಾವಿ ಪಟ್ಟಣದಲ್ಲಿ ನಡೆದ ಶ್ರೀ ಭಗೀರಥ ಜಯಂತಿ ನಿಮಿತ್ಯವಾಗಿ ಆದ್ಯಾತ್ಮೀಕ ಪ್ರವಚನ ಕಾರ್ಯಕ್ರಮ.

Spread the loveಮೂಡಲಗಿ ತಾಲೂಕಿನ ಅರಭಾವಿ ಪಟ್ಟಣದಲ್ಲಿ ನಡೆದ ಶ್ರೀ ಭಗೀರಥ ಜಯಂತಿ ನಿಮಿತ್ಯವಾಗಿ ಆದ್ಯಾತ್ಮೀಕ ಪ್ರವಚನ ಕಾರ್ಯಕ್ರಮ. ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ