Breaking News
Home / ರಾಜಕೀಯ / ಕೊಲೆಗಡುಕ ಶಕ್ತಿಗಳ ಮುಂದೆ ಸರ್ಕಾರ ಮಂಡಿಯೂರಿದೆ: ಎಚ್‌ಡಿಕೆ

ಕೊಲೆಗಡುಕ ಶಕ್ತಿಗಳ ಮುಂದೆ ಸರ್ಕಾರ ಮಂಡಿಯೂರಿದೆ: ಎಚ್‌ಡಿಕೆ

Spread the love

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಜರಂಗದಳದ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಖಂಡಿಸಿದ್ದಾರೆ.

ರಾಜ್ಯದಲ್ಲಿ ಇತ್ತೀಚೆಗೆ ನಡೆದ ಹತ್ಯೆ ಪ್ರಕರಣಗಳನ್ನು ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 

‘ರಾಜ್ಯದಲ್ಲಿ ಯುವಕರ ಕೊಲೆಗಳ ಸರಣಿಯೇ ಮುಂದುವರಿದಿದ್ದು, ಇನ್ನೊಂದು ಜೀವ ಹೋಗಿದೆ. ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ? ಕೊಲೆ ಅದ ಮೇಲೆ ನಡೆಯುವ ಹೇಳಿಕೆಗಳ ಭರಾಟೆ, ಕೂಗಾಟದಿಂದ ಪ್ರಯೋಜನ ಏನು? ಶಿವಮೊಗ್ಗದಲ್ಲಿ ಹರ್ಷ ಕೊಲೆ ಅದ ಮೇಲೆ ಬಿಜೆಪಿ ಸರ್ಕಾರ ಮೈಮರೆತಿದ್ದು ಯಾಕೆ’ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

‘ಪ್ರತಿ ಕೊಲೆ ಅದ ಮೇಲೆಯೂ ಮೈ ಕೊಡವಿಕೊಂಡು ಎದ್ದೇಳುವ ಬಿಜೆಪಿ ಸರ್ಕಾರ, ಕೊಲೆಯೇ ಆಗದಂತೆ ತಡೆಯುವ ಪ್ರಯತ್ನ ಮಾಡುತ್ತಿಲ್ಲ, ಏಕೆ? ಕೊಲೆಗಳೆಂದರೆ ಕೆಲವರಿಗೇಕೆ ಇಷ್ಟೊಂದು ಇಷ್ಟ? ಚುನಾವಣೆ ಹತ್ತಿರ ಆದಂತೆಲ್ಲ ನೆತ್ತರ ಓಕುಳಿ ಹರಿಯುತ್ತಿದೆ! ಈ ನೆತ್ತರ ಮೇಲೆ ರಾಜಕೀಯ ಆಟ ವಿಜೃಂಭಿಸುತ್ತಿದೆ’ ಎಂದು ಎಚ್‌ಡಿಕೆ ಆಕ್ರೋಶ ಹೊರಹಾಕಿದ್ದಾರೆ.


Spread the love

About Laxminews 24x7

Check Also

ಹೋಟೆಲ್ ರೂಮಿನಲ್ಲಿ ಇಬ್ಬರು ಪುರುಷರೊಂದಿಗೆ ವಿವಾಹಿತ ಮಹಿಳೆಯ ಚೆಲ್ಲಾಟ

Spread the love ಇತ್ತೀಚಿನ ದಿನಗಳಲ್ಲಿ ವಿವಾಹಿತ ಪುರುಷರು ಮತ್ತು ಮಹಿಳೆಯರ ಅಕ್ರಮ ಸಂಬಂಧದ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಇಂತಹದ್ದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ