Breaking News
Home / Uncategorized / ಪ್ರವೀಣ್ ಅಂತಿಮ ಯಾತ್ರೆ : ಸಚಿವರು, ಬಿಜೆಪಿ ನಾಯಕರ ವಿರುದ್ಧವೇ ಆಕ್ರೋಶ

ಪ್ರವೀಣ್ ಅಂತಿಮ ಯಾತ್ರೆ : ಸಚಿವರು, ಬಿಜೆಪಿ ನಾಯಕರ ವಿರುದ್ಧವೇ ಆಕ್ರೋಶ

Spread the love

ಪುತ್ತೂರು: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ ಪ್ರವೀಣ್‌ ನೆಟ್ಟಾರು ಅವರ ಅಂತಿಮ ಯಾತ್ರೆ ವೇಳೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಸಚಿವರು ಮತ್ತು ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರ ಹಾಕಿ ಧಿಕ್ಕಾರ ಕೂಗಿದ ಘಟನೆ ನಡೆದಿದೆ.

 

ಬೆಳ್ಳಾರೆಯಲ್ಲಿ ಅಂತಿಮ ದರ್ಶನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾವಣೆಗೊಂಡಿದ್ದು, ಈ ವೇಳೆ ಆಗಮಿಸಿದ ಸಚಿವರಾದ ಸುನಿಲ್ ಕುಮಾರ್ , ಎಸ್ . ಆಂಗಾರ , ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕರಾದ ಸಂಜೀವ ಮಠಂದೂರು, ಹರೀಶ್ ಪೂಂಜಾ ಅವರು ಅಂತಿಮ ದರ್ಶನಕ್ಕೆ ಆಗಮಿಸಿದ್ದರು. ಈ ವೇಳೆ ಆಕ್ರೋಶಿತ ಹಿಂದೂ ಪರ ಸಂಘಟನೆಯ ನೂರಾರು ಕಾರ್ಯಕರ್ತರು ಸರಕಾರದ ಕಾರ್ಯ ವೈಖರಿಯ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿ ಧಿಕ್ಕಾರ ಕೂಗಿದರು. ಹತ್ಯೆ ಆರೋಪಿಗಳ ವಿರುದ್ಧ ಕಠಿಣಾತಿ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಸಾವಿರಾರು ಜನರ ಆಕ್ರೋಶದ ನಡುವೆ ಬಿಜೆಪಿಯ ನಾಯಕರೆಲ್ಲರೂ ಮೌನಕ್ಕೆ ಶರಣಾಗಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು.

ಲಾಠಿ ಬೀಸಿದ ಪೊಲೀಸರು


Spread the love

About Laxminews 24x7

Check Also

ಎಸ್‌ಐಟಿ ತನಿಖೆಯಲ್ಲಿ ಸರ್ಕಾರ ಮಧ್ಯ ಪ್ರವೇಶ ಮಾಡಲ್ಲ ಎಂದ ಸಿಎಂ

Spread the loveಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪಗಳ ಬಗ್ಗೆ ಎಸ್‌ಐಟಿ ನಡೆಸುತ್ತಿರುವ ತನಿಖೆಯಲ್ಲಿ ಸರ್ಕಾರ ಯಾವುದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ